alex Certify ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ: ಇಂದಿನಿಂದ NIA ತನಿಖೆ ಶುರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ: ಇಂದಿನಿಂದ NIA ತನಿಖೆ ಶುರು

ಮಂಗಳೂರು: ಮಂಗಳೂರಿನಲ್ಲಿ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣವನ್ನು ಎನ್ಐಎ ಅಧಿಕಾರಿಗಳಿಗೆ ಅಧಿಕೃತವಾಗಿ ಹಸ್ತಾಂತರ ಮಾಡಲಾಗುವುದು.

ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಅವರು ಎನ್ಐಎ ಅಧಿಕಾರಿಗಳಿಗೆ ಹಸ್ತಾಂತರ ಮಾಡಲಿದ್ದು, ಇಂದಿನಿಂದ ಎನ್ಐಎ ಅಧಿಕಾರಿಗಳು ತನಿಖೆ ಆರಂಭಿಸಲಿದ್ದಾರೆ.

ಪೊಲೀಸರು ಈಗಾಗಲೇ ಶಾರಿಕ್ ಹೇಳಿಕೆ ದಾಖಲಿಸಿಕೊಂಡಿದ್ದಾರೆ. ಖುದ್ದಾಗಿ ಪೊಲೀಸ್ ಕಮಿಷನರ್ ನೇತೃತ್ವದಲ್ಲಿ ಹೇಳಿಕೆ ದಾಖಲಿಸಿಕೊಳ್ಳಲಾಗಿದೆ. ತನಿಖಾ ತಂಡದಿಂದ ಶಾರಿಕ್ ಹೇಳಿಕೆ ವಿಡಿಯೋ ರೆಕಾರ್ಡ್ ಮಾಡಿಕೊಳ್ಳಲಾಗಿದೆ.

ಮಂಗಳೂರು ನಗರ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್, ತನಿಖಾಧಿಕಾರಿ ಪಿ.ಎ. ಹೆಗಡೆ ಎದುರು ಆರೋಪಿ ಹೇಳಿಕೆ ದಾಖಲಿಸಲಾಗಿದೆ. ಇಂದಿನಿಂದ ಎನ್ಐಎ ಅಧಿಕಾರಿಗಳು ಪ್ರತ್ಯೇಕ ಹೇಳಿಕೆ ಪಡೆಯಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...