alex Certify ಶಿವಮೊಗ್ಗಕ್ಕೆ ಕೇಂದ್ರ ಸಚಿವ ಗಡ್ಕರಿ: 2138 ಕೋಟಿ ರೂ. ಕಾಮಗಾರಿಗಳಿಗೆ ಶಂಕುಸ್ಥಾಪನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಿವಮೊಗ್ಗಕ್ಕೆ ಕೇಂದ್ರ ಸಚಿವ ಗಡ್ಕರಿ: 2138 ಕೋಟಿ ರೂ. ಕಾಮಗಾರಿಗಳಿಗೆ ಶಂಕುಸ್ಥಾಪನೆ

ಶಿವಮೊಗ್ಗ: ಕೇಂದ್ರ ಭೂ ಸಾರಿಗೆ ಸಚಿವ ನಿತಿನ್‌ ಗಡ್ಕರಿ ಅವರು ಫೆ.22ರಂದು ಶಿವಮೊಗ್ಗಕ್ಕೆ ಭೇಟಿ ನೀಡಲಿದ್ದು, 139.41 ಕೋಟಿ ರೂ. ವೆಚ್ಚದ ನಾಲ್ಕು ಕಾಮಗಾರಿಗಳ ಉದ್ಘಾಟನೆ, 2138.30 ಕೋಟಿ ರೂ. ವೆಚ್ಚದ 6 ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಸಂಸದ ಬಿ.ವೈ.ರಾಘವೇಂದ್ರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿ, ನಗರದ ನೆಹರು ಕ್ರೀಡಾಂಗಣದಲ್ಲಿ ಗುರುವಾರ ಮಧ್ಯಾಹ್ನ ಕಾರ್ಯಕ್ರಮ ನಡೆಯಲಿದೆ. ರಾಷ್ಟ್ರೀಯ ಹೆದ್ದಾರಿಯ ದಕ್ಷಿಣ ವಲಯಕ್ಕೆ ಸೇರಿದ ವಿವಿಧ ಜಿಲ್ಲೆಗಳ 18 ಕಾಮಗಾರಿಗಳನ್ನು ನಿತಿನ್‌ ಗಡ್ಕರಿ ಅವರು ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಈ ಪೈಕಿ ಶಿವಮೊಗ್ಗ ಜಿಲ್ಲೆಯ 4 ಕಾಮಗಾರಿಗಳ ಉದ್ಘಾಟನೆ, 6 ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ಬೈಂದೂರು – ರಾಣೆಬೆನ್ನೂರು ರಸ್ತೆಯ ಮಡೋಡಿ, ಮತ್ತಿಮನೆ, ನಗರ, ಆರೋಡಿ, ಕಾರಣಗಿರಿ, ಮಾವಿನಕೊಪ್ಪ, ಬ್ರಹ್ಮೇಶ್ವರ ಬಳಿ 19.77 ಕೋಟಿ ರೂ. ವೆಚ್ಚದ 7 ಕಿರು ಸೇತುವೆಗಳು.ಶಿವಮೊಗ್ಗ ವಿದ್ಯಾನಗರದಲ್ಲಿ 43.90 ಕೋಟಿ ರೂ. ವೆಚ್ಚದ ರೈಲ್ವೆ ಮೇಲ್ಸೇತುವೆ. ಶಿವಮೊಗ್ಗ ಬೈಪಾಸ್‌ ರಸ್ತೆಯಲ್ಲಿ ತುಂಗಾ ನದಿಗೆ ಅಡ್ಡಲಾಗಿ 20.12 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ನೂತನ ಸೇತುವೆ. ತೀರ್ಥಹಳ್ಳಿಯಲ್ಲಿ 55.62 ಕೋಟಿ ರೂ. ವೆಚ್ಚದಲ್ಲಿ ತುಂಗಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಸೇತುವೆ, ಬೈಪಾಸ್‌ ರಸ್ತೆ ಉದ್ಘಾಟಿಸಲಿದ್ದಾರೆ.

ಶಿವಮೊಗ್ಗದ ಸಿಂಹಧಾಮದಿಂದ ಆನಂದಪುರದವರೆಗೆ 653 ಕೋಟಿ ರೂ. ವೆಚ್ಚದಲ್ಲಿ 4 ಪಥದ ರಸ್ತೆ ನಿರ್ಮಾಣ. ಕುಂಸಿ ಮತ್ತು ಯಡೇಹಳ್ಳಿ ರೈಲ್ವೆ ಮೇಲ್ಸೇತುವೆ. ಕುಂಸಿ, ಚೋರಡಿ, ಕೋಣೆಹೊಸೂರು, ಯಡೇಹಳ್ಳಿ, ಆನಂದಪುರ ಬೈಪಾಸ್‌ ರಸ್ತೆ, ಹೊಸೂರು ಮತ್ತು ತಾಳಗುಪ್ಪ ಬಳಿ 198.58 ಕೋಟಿ ರೂ. ವೆಚ್ಚದಲ್ಲಿ ರೈಲ್ವೆ ಮೇಲ್ಸೇತುವೆ ಮತ್ತು ಬೈಪಾಸ್‌ ರಸ್ತೆ ನಿರ್ಮಾಣ. ಶಿವಮೊಗ್ಗದ ಸಂದೇಶ್‌ ಮೋಟರ್ಸ್‌ನಿಂದ ಹರಕೆರೆವರೆಗೆ 39.50 ಕೋಟಿ ರೂ. ವೆಚ್ಚದಲ್ಲಿ 4 ಪಥದ ರಸ್ತೆ ನಿರ್ಮಾಣ ಸೇರಿ ಹಲವು ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...