alex Certify ರಾಜ್ಯದಲ್ಲಿ ಕ್ರಿಸ್ಮಸ್‌, ಹೊಸ ವರ್ಷಕ್ಕೆ ʻಗೈಡ್‌ ಲೈನ್ಸ್‌ʼ ಇಲ್ಲ : ಸಚಿವ ದಿನೇಶ್‌ ಗುಂಡೂರಾವ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿ ಕ್ರಿಸ್ಮಸ್‌, ಹೊಸ ವರ್ಷಕ್ಕೆ ʻಗೈಡ್‌ ಲೈನ್ಸ್‌ʼ ಇಲ್ಲ : ಸಚಿವ ದಿನೇಶ್‌ ಗುಂಡೂರಾವ್

ದಕ್ಷಿಣ ಕನ್ನಡ : ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದು ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಆರೋಗ್ಯ ಇಲಾಖೆ ಸೇರಿದಂತೆ ಹಿರಿಯ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ಕೋವಿಡ್ ಪ್ರಕರಣಗಳು ವರದಿಯಾಗುತ್ತಿರುವ ಹಿನ್ನಲೆಯಲ್ಲಿ ಕೇರಳದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಪ್ರವೇಶಿಸುವ ಗಡಿ ಭಾಗದ ಐದು ಕಡೆಗಳಲ್ಲಿ ತಾತ್ಕಾಲಿಕ ಚೆಕ್ ಪೋಸ್ಟ್‌ಗಳನ್ನು ನಿರ್ಮಿಸಲಾಗಿದೆ. ತಪಾಸಣೆಯನ್ನು ಹೆಚ್ಚಿಸಲಾಗಿದ್ದು, ಧ್ವನಿವರ್ಧಕ ಮೂಲಕ ಜಾಗೃತಿ ಹಾಗೂ ಮಾಹಿತಿ ನೀಡಲಾಗುತ್ತಿದೆ ಎಂದು ಹೇಳಿದ್ದಾರೆ.

ಆರ್‌ಟಿಪಿಸಿಆರ್‌,, ಪಿಪಿಇ ಕಿಟ್‌ಗಳ ಲಭ್ಯತೆ, ಆಕ್ಸಿಜನ್ ಬೆಡ್, ಐಸಿಯು, ವೆಂಟಿಲೇಟರ್ ಕಾರ್ಯ ನಿರ್ವಹಣೆ ಸೇರಿದಂತೆ ಎಲ್ಲಾ ತಾಲೂಕು, ಹಾಗೂ ಆರೋಗ್ಯ ಕೇಂದ್ರಗಳಲ್ಲಿ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಕ್ರಿಸ್ಮಸ್, ಹೊಸ ವರ್ಷ ಸಂಭ್ರಮಾಚರಣೆಗಳಿಗೆ ಯಾವುದೇ ರೀತಿಯ ಪ್ರತ್ಯೇಕ ನಿರ್ಬಂಧ ಅಥವಾ ಹೊಸ ಮಾರ್ಗಸೂಚಿ ಇರುವುದಿಲ್ಲ. ಆದರೆ ಅಗತ್ಯ ಮುಂಜಾಗೃತಾ ಹಾಗೂ ಎಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...