alex Certify ಬಕ್ರೀದ್ ಸಂದರ್ಭದಲ್ಲಿ ರಸ್ತೆ ಮೇಲೆ ಪ್ರಾರ್ಥನೆ ಮಾಡುವಂತಿಲ್ಲ: ಬಿಬಿಎಂಪಿ ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಕ್ರೀದ್ ಸಂದರ್ಭದಲ್ಲಿ ರಸ್ತೆ ಮೇಲೆ ಪ್ರಾರ್ಥನೆ ಮಾಡುವಂತಿಲ್ಲ: ಬಿಬಿಎಂಪಿ ಸೂಚನೆ

ಜುಲೈ 10 ರಂದು ನಡೆಯಲಿರುವ ಬಕ್ರೀದ್ ಹಬ್ಬದ ಸಂದರ್ಭದಲ್ಲಿ ರಸ್ತೆಯ ಮೇಲೆ ಪ್ರಾರ್ಥನೆ ಮಾಡುವಂತಿಲ್ಲ ಎಂದು ಬಿಬಿಎಂಪಿ ಸ್ಪಷ್ಟ ಸೂಚನೆ ನೀಡಿದೆ. ಟ್ರಾಫಿಕ್ ಸಮಸ್ಯೆ ಎದುರಾಗದಂತೆ ನೋಡಿಕೊಳ್ಳುವ ಸಲುವಾಗಿ ಈ ತೀರ್ಮಾನ ಕೈಗೊಳ್ಳಲಾಗಿದ್ದು, ಈ ಕುರಿತು ಬೆಂಗಳೂರು ಪೊಲೀಸ್ ಕಮಿಷನರ್ ಅವರಿಗೂ ಮಾಹಿತಿ ನೀಡಲಾಗಿದೆ.

ಬೆಂಗಳೂರಿನ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಸಹ ಪ್ರಾರ್ಥನೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ಈ ಕುರಿತಂತೆ ಸುಪ್ರೀಂ ಕೋರ್ಟಿನ ಸ್ಪಷ್ಟ ಆದೇಶವಿದೆ ಎಂದು ಹೇಳಲಾಗಿದೆ.

ಇನ್ನು ಹಬ್ಬದ ಸಂದರ್ಭದಲ್ಲಿ ಹಸು, ಎಮ್ಮೆ, ಒಂಟೆಗಳನ್ನು ಬಲಿ ಕೊಡಲು ನಿರ್ಬಂಧವಿದ್ದು, ಹೀಗಾಗಿ ಈ ಕುರಿತು ಕಣ್ಗಾವಲು ಇಡಲು ತಂಡಗಳನ್ನು ರಚಿಸಲಾಗಿದೆ. ಯಾರಿಗಾದರೂ ಮಾಹಿತಿ ಇದ್ದಲ್ಲಿ 8277100200 ಸಂಖ್ಯೆಗೆ ಕರೆ ಮಾಡಬಹುದಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...