alex Certify BIG NEWS: ಕರೆನ್ಸಿ ನೋಟುಗಳಲ್ಲಿ ಸ್ವಾತಂತ್ರ್ಯ ಹೋರಾಟಗಾರರು, ದೇವರ ಫೋಟೋ ಸೇರಿಸಲು ಮನವಿ: ಗಾಂಧಿ ಚಿತ್ರ ತೆಗೆಯುವ ಯೋಜನೆ ಇಲ್ಲ: ಸರ್ಕಾರ ಸ್ಪಷ್ಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕರೆನ್ಸಿ ನೋಟುಗಳಲ್ಲಿ ಸ್ವಾತಂತ್ರ್ಯ ಹೋರಾಟಗಾರರು, ದೇವರ ಫೋಟೋ ಸೇರಿಸಲು ಮನವಿ: ಗಾಂಧಿ ಚಿತ್ರ ತೆಗೆಯುವ ಯೋಜನೆ ಇಲ್ಲ: ಸರ್ಕಾರ ಸ್ಪಷ್ಟನೆ

ನವದೆಹಲಿ: ಭಾರತೀಯ ಕರೆನ್ಸಿ ನೋಟುಗಳಿಂದ ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ಚಿತ್ರ ತೆಗೆಯುವ ಯಾವುದೇ ಯೋಜನೆ ಇಲ್ಲ ಎಂದು ಸರ್ಕಾರ ಇಂದು ಸ್ಪಷ್ಟಪಡಿಸಿದೆ.

ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ ಚೌಧರಿ ಲೋಕಸಭೆಯಲ್ಲಿ ಲಿಖಿತ ಉತ್ತರದಲ್ಲಿ ಈ ವಿಷಯ ತಿಳಿಸಿದ್ದಾರೆ. ಭಾರತೀಯ ನೋಟುಗಳಲ್ಲಿ ಸ್ವಾತಂತ್ರ್ಯ ಹೋರಾಟಗಾರರು, ಗಣ್ಯ ವ್ಯಕ್ತಿಗಳು, ದೇವರು ಮತ್ತು ದೇವತೆಗಳ ಚಿತ್ರಗಳನ್ನು ಸೇರಿಸಲು ಹಲವಾರು ಮನವಿಗಳನ್ನು ಸ್ವೀಕರಿಸಲಾಗಿದೆ ಎಂದು ಹೇಳಿದರು.

ಈಗಿರುವ ಕರೆನ್ಸಿ ಮತ್ತು ಬ್ಯಾಂಕ್ ನೋಟುಗಳಲ್ಲಿ ಬದಲಾವಣೆ ಮಾಡುವ ಯಾವುದೇ ಪ್ರಸ್ತಾಪವಿಲ್ಲ ಎಂದು ಆರ್‌ಬಿಐ ಈಗಾಗಲೇ ಸ್ಪಷ್ಟಪಡಿಸಿದೆ ಎಂದು ಅವರು ಹೇಳಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...