alex Certify ರೈತ ಬಾಂಧವರೇ ಗಮನಿಸಿ : ಏ. 1 ರಿಂದ ರಾಜ್ಯಾದ್ಯಂತ ಕಾಲುಬಾಯಿ ಲಸಿಕಾ ಅಭಿಯಾನ ಆರಂಭ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈತ ಬಾಂಧವರೇ ಗಮನಿಸಿ : ಏ. 1 ರಿಂದ ರಾಜ್ಯಾದ್ಯಂತ ಕಾಲುಬಾಯಿ ಲಸಿಕಾ ಅಭಿಯಾನ ಆರಂಭ..!

ಬೆಂಗಳೂರು : ಏ. 1 ರಿಂದ ರಾಜ್ಯಾದ್ಯಂತ ಕಾಲುಬಾಯಿ ಲಸಿಕಾ ಅಭಿಯಾನ ಆರಂಭವಾಗಲಿದ್ದು, ಪಶುಪಾಲಕರು, ರೈತರು ತಪ್ಪದೇ ಲಸಿಕೆ ಹಾಕಿಸುವಂತೆ ಸರ್ಕಾರ ಪ್ರಕಟಣೆ ಹೊರಡಿಸುವ ಮೂಲಕ ಮನವಿ ಮಾಡಿದೆ.

ಕಾಲುಬಾಯಿ ರೋಗದ ವಿರುದ್ಧ ಎಲ್ಲಾ ದನ, ಎಮ್ಮೆ ಮತ್ತು ಕರುಗಳಿಗೆ ಉಚಿತವಾಗಿ ಲಸಿಕಾ ಕಾರ್ಯಕ್ರಮವನ್ನು ಏಪ್ರಿಲ್ 1 ರಿಂದ ಏಪ್ರಿಲ್ 30ರವರೆಗೆ ಹಮ್ಮಿಕೊಳ್ಳಲಾಗಿದೆ. ಲಸಿಕಾದಾರರು ನಿಮ್ಮ ಗ್ರಾಮಕ್ಕೆ ನಿಮ್ಮ ಮನೆ ಬಾಗಿಲಿಗೆ ಭೇಟಿ ನೀಡಿ ಜಾನುವಾರುಗಳಿಗೆ ಲಸಿಕೆ ಹಾಕಲಿದ್ದಾರೆ.

ತಪ್ಪದೇ ನಿಮ್ಮ ಜಾನುವಾರುಗಳಿಗೆ ಕಾಲುಬಾಯಿ ರೋಗ ಲಸಿಕೆಯನ್ನು ಹಾಕಿಸಿ, ರೋಗ ಬಾರದಂತೆ ಜಾನುವಾರುಗಳನ್ನು ರಕ್ಷಿಸಿ, ಆರ್ಥಿಕ ನಷ್ಟ ತಡೆಯಿರಿ. ರಾಜ್ಯವನ್ನು ಕಾಲುಬಾಯಿ ರೋಗ ಮುಕ್ತ ವಲಯವನ್ನಾಗಿಸಲು ಸಂಕಲ್ಪ ಮಾಡೋಣ ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...