alex Certify ಗಮನಿಸಿ : ಸಾಮಾಜಿಕ ಭದ್ರತಾ ವಿಮೆ ಯೋಜನೆ ನೋಂದಣಿಗೆ ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ : ಸಾಮಾಜಿಕ ಭದ್ರತಾ ವಿಮೆ ಯೋಜನೆ ನೋಂದಣಿಗೆ ಸೂಚನೆ

ಬಳ್ಳಾರಿ : ಕೇಂದ್ರ ಸರ್ಕಾರದ ಸಾಮಾಜಿಕ ಭದ್ರತೆ ಯೋಜನೆಗಳಾದ ಪ್ರಧಾನ ಮಂತ್ರಿ ಸುರಕ್ಷಾ ಭೀಮಾ ಯೋಜನೆ ಹಾಗೂ ಪ್ರಧಾನ ಮಂತ್ರಿ ಜೀವನ್ ಜ್ಯೋತಿ ಭೀಮಾ ಯೋಜನೆಗಳಡಿ ನಾಗರಿಕರು ನೋಂದಾಯಿಸಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶರಣಪ್ಪ ಸಂಕನೂರ ಅವರು ತಿಳಿಸಿದ್ದಾರೆ.

ಪ್ರತಿಯೊಂದು ಬ್ಯಾಂಕ್ ಹಾಗೂ ಗ್ರಾಮ ಪಂಚಾಯತಿ ಮಟ್ಟದಲ್ಲಿ ಪಿಎಂಜೆಜೆಬಿವೈ ಹಾಗೂ ಪಿಎಂಎಸ್ಬಿವೈ ವಿಮಾ ಯೋಜನೆಗಳಡಿ ನೋಂದಾಯಿಸಿಕೊಳ್ಳಲು ಅಕ್ಟೋಬರ್ನಿಂದ ಡಿಸೆಂಬರ್ 31 ರವರೆಗೆ ನೋಂದಣಿ ಮೇಳ ನಡೆಯುತ್ತಿವೆ. ಸಾರ್ವಜನಿಕರು ಇದರ ಸದುಪಯೋಗ ಪಡೆಯಬೇಕು ಎಂದು ಅವರು ಕೋರಿದ್ದಾರೆ.
ಸಾಮಾಜಿಕ ಭದ್ರತಾ ಯೋಜನೆಗಳಾದ ಪ್ರಧಾನ ಮಂತ್ರಿ ಸುರಕ್ಷಾ ಭೀಮಾ ಯೋಜನೆಯಡಿ 18 ರಿಂದ 70 ವಯಸ್ಸಿನ ವರೆಗಿನ ನಾಗರಿಕರು ರೂ.20 ಮತ್ತು ಪ್ರಧಾನ ಮಂತ್ರಿ ಜೀವನ್ ಜ್ಯೋತಿ ಭೀಮಾ ಯೋಜನೆಯಡಿ18 ರಿಂದ 50 ವಯಸ್ಸಿನ ವರೆಗಿನ ನಾಗರಿಕರು ರೂ.436 ಗಳ ಪ್ರೀಮಿಯಂ ಹಣವನ್ನು ವಾರ್ಷಿಕವಾಗಿ ಪಾವತಿಸಿದರೆ, ಪ್ರತಿ ಯೋಜನೆಯಡಿ ರೂ.2 ಲಕ್ಷದವರೆಗೆ ವಿಮೆ ಸೌಲಭ್ಯ ದೊರಕುತ್ತದೆ.

ಈ ಅಭಿಯಾನದಡಿ ಗ್ರಾಮ ಪಂಚಾಯಿತಿಯ ಪ್ರತಿಯೊಬ್ಬ ಅರ್ಹ ನಾಗರಿಕರು ಎರಡು ಯೋಜನೆಗಳಲ್ಲಿ ನೋಂದಣಿ ಮಾಡುವ ಉದ್ದೇಶದಿಂದ ತಮ್ಮ ಗ್ರಾಮ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಬ್ಯಾಂಕ್ ಶಾಖೆ ಅಧಿಕಾರಿಗಳಿಗೆ ತಿಂಗಳಿಗೊಮ್ಮೆ ಪಿಎಂಜೆಜೆಬಿವೈ, ಪಿಎಂಎಸ್ಬಿವೈ ಹಾಗೂ ಕೆಸಿಸಿ ಬೆಳೆಸಾಲ ಮೇಳ ಹಮ್ಮಿಕೊಳ್ಳಲು ಪ್ರತಿ ಪಂಚಾಯಿತಿಗೆ ಲೀಡ್ ಬ್ಯಾಂಕ್ನಿಂದ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಗ್ರಾಮ ಪಂಚಾಯತಿ ಮಟ್ಟದ ಸ್ವ-ಸಹಾಯ ಸಂಘಗಳ ಒಕ್ಕೂಟದ ಸದಸ್ಯರು, ಕೃಷಿ ಸಖಿ, ಪಶು ಸಖಿ ಹಾಗು ಎಂಬಿಕೆ, ಕಂದಾಯ ಇಲಾಖೆ, ಕೃಷಿ, ತೋಟಗಾರಿಕೆ ಮತ್ತು ಪಶು ಸಂಗೋಪನಾ ಇಲಾಖೆಗಳ ಸಹಯೋಗದೊಂದಿಗೆ ಬ್ಯಾಂಕಿನ ಅಧಿಕಾರಿಗಳ ಜೊತೆಗೂಡಿ ವಿಮೆ ಸೌಲಭ್ಯಕ್ಕೆ ನೋಂದಾಯಿಸಿಕೊಳ್ಳಲು ಜಾಗೃತಿ ನೀಡಬೇಕು ಹಾಗೂ ಪ್ರತಿಯೊಬ್ಬರೂ ಮೇಳಗಳಲ್ಲಿ ಭಾಗವಹಿಸಿ ನೋಂದಣಿ ಮಾಡಿಕೊಳ್ಳಬೇಕು ಎಂದು ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...