alex Certify ಗಮನಿಸಿ : ಪಿಂಚಣಿ ಪಾವತಿ ಖಾತೆಗೆ ಆಧಾರ್ ಲಿಂಕ್ ಮಾಡಲು ಸೆ.30 ಕೊನೆಯ ದಿನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ : ಪಿಂಚಣಿ ಪಾವತಿ ಖಾತೆಗೆ ಆಧಾರ್ ಲಿಂಕ್ ಮಾಡಲು ಸೆ.30 ಕೊನೆಯ ದಿನ

ಕಂದಾಯ ಇಲಾಖೆಯಿಂದ ಸಾಮಾಜಿಕ ಭದ್ರತಾ ಯೋಜನೆಗಳಡಿ ಮಾಸಿಕ ಪಿಂಚಣಿ ಮತ್ತು ಸಹಾಯಧನ ಪಡೆಯುವ ಫಲಾನುಭವಿಗಳು ಕಡ್ಡಾಯವಾಗಿ ಆಧಾರ್ ಸಂಖ್ಯೆಯನ್ನು ತಮ್ಮ ಬ್ಯಾಂಕ್, ಅಂಚೆ ಉಳಿತಾಯ ಖಾತೆಗೆ ಎನ್.ಪಿ.ಸಿ.ಐ ಜೋಡಣೆ ಮಾಡಿಸುವುದು ಕಡ್ಡಾಯವಾಗಿದೆ.

ಸಾಮಾಜಿಕ ಭದ್ರತೆ ಮತ್ತು ಪಿಂಚಣಿ ಯೋಜನೆಗಳಡಿ ಪಿಂಚಣಿ ಯೋಜನೆಗಳಾದ ವೃದ್ದಾಪ್ಯ ವೇತನ, ಸಂಧ್ಯಾ ಸುರಕ್ಷಾ, ವಿಧವಾ ವೇತನ, ಅಂಗವಿಕಲ ವೇತನ, ಮನಸ್ವಿನಿ ಮತ್ತು ಮೈತ್ರಿ ಯೋಜನೆಗಳನ್ನು ನೇರ ಹಣ ಸಂದಾಯ ಯೋಜನೆಯಡಿ ತರುವ ನಿಟ್ಟಿನಲ್ಲಿ, ಜಿಲ್ಲೆಯಲ್ಲಿ ಪಿಂಚಣಿ ಪಡೆಯುತ್ತಿರುವ ಅರ್ಹ ಫಲಾನುಭವಿಗಳ ಬ್ಯಾಂಕ್ ಮತ್ತು ಪೋಸ್ಟ್ ಖಾತೆಗಳಲ್ಲಿ ಎನ್.ಪಿ.ಸಿ.ಐ ಲಿಂಕ್ ಮತ್ತು ಆಧಾರ್ ಜೋಡಣೆಯಾಗದೆ ಇರುವುದರಿಂದ ಪಿಂಚಣಿ ಪಡೆಯುತ್ತಿರುವ ಫಲಾನುಭವಿಗಳು ಸಂಬಂಧಪಟ್ಟ ತಮ್ಮ ಬ್ಯಾಂಕ್ ಗಳಿಗೆ, ಅಂಚೆ ಕಚೇರಿಗಳಿಗೆ, ನಾಡ ಕಛೇರಿಗಳಿಗೆ ಹಾಗೂ ತಾಲ್ಲೂಕು ಕಚೇರಿಗಳಿಗೆ ಭೇಟಿ ನೀಡಿ ತಮ್ಮ ಆಧಾರ್ ಕಾರ್ಡ್, ಬ್ಯಾಂಕ್ ಖಾತೆ ಅಥವಾ ಅಂಚೆ ಖಾತೆಗಳನ್ನು ಸೆಪ್ಟೆಂಬರ್ 30 ರೊಳಗಾಗಿ ಕಡ್ಡಾಯವಾಗಿ ಎನ್.ಪಿ.ಸಿ.ಐ ಮತ್ತು ಆಧಾರ್ ಜೋಡಣೆ ಮಾಡಬೇಕು. ತಪ್ಪಿದ್ದಲ್ಲಿ ಸರ್ಕಾರವು ಕಾಲ ಕಾಲಕ್ಕೆ ತೆಗೆದುಕೊಳ್ಳುವ ನಿರ್ಧಾರಗಳಿಗೆ ಅರ್ಹ ಫಲಾನುಭವಿಗಳೆ ಜವಾಬ್ದಾರರಾಗಿರುತ್ತಾರೆ ಎಂದು ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಾಮಾಜಿಕ ಭದ್ರತಾ ಯೋಜನೆಗಳಾದ ವೃದ್ದಾಪ್ಯ ವೇತನ, ಸಂಧ್ಯಾ ಸುರಕ್ಷಾ ವೇತನ, ವಿಧವಾ ವೇತನ, ರೈತರ ಆತ್ಮಹತ್ಯೆ ಪ್ರಕರಣಗಳಡಿ ರೈತನ ಪತ್ನಿಗೆ ನೀಡುವ ವಿಧವಾ ವೇತನ, ಆಸಿಡ್ ಪ್ರಕರಣಗಳಡಿ ನೀಡುವ ವೇತನ, ಅಂಗವಿಕಲರ ವೇತನ, ಮನಸ್ವಿನಿ, ಮೈತ್ರಿ ಮತ್ತು ರಾಷ್ಟ್ರೀಯ ಕುಟುಂಬ ನೆರವು ಯೋಜನೆಗಳಡಿ ಆಧಾರ್ ಆಧಾರಿತ ನೇರವಾಗಿ ಹಣ ಪಾವತಿಸುವುದರಿಂದ, ಫಲಾನುಭವಿಗಳು ಬ್ಯಾಂಕ್, ಅಂಚೆ ಕಚೇರಿಗೆ ತೆರಳಿ ತಮ್ಮ ಆಧಾರ್ ನಂಬರ್ ಅನ್ನು ಉಳಿತಾಯ ಖಾತೆಗೆ ಎನ್.ಪಿ.ಸಿ.ಐ ಜೋಡಣೆ ಮಾಡಿಸಬೇಕು. ಇಲ್ಲದಿದ್ದಲ್ಲಿ ಮುಂಬರುವ ದಿನಗಳಲ್ಲಿ ಮಾಸಿಕ ಪಿಂಚಣಿ ಮತ್ತು ಸಹಾಯಧನ ಪಡೆಯಲು ತೊಂದರೆಯಾಗುತ್ತದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...