alex Certify ಬೆಂಗಳೂರಿಗರೇ ಗಮನಿಸಿ : ನಾಳೆ ಈ ಮಾರ್ಗದಲ್ಲಿ ವಾಹನ ಸಂಚಾರ ಬಂದ್, ಇಲ್ಲಿದೆ ಪರ್ಯಾಯ ಮಾರ್ಗ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರಿಗರೇ ಗಮನಿಸಿ : ನಾಳೆ ಈ ಮಾರ್ಗದಲ್ಲಿ ವಾಹನ ಸಂಚಾರ ಬಂದ್, ಇಲ್ಲಿದೆ ಪರ್ಯಾಯ ಮಾರ್ಗ

ಬೆಂಗಳೂರು : ನಾಳೆ (08.02.2024) ರಂದು ವಿಧಾನಸೌಧದಲ್ಲಿ ಜನಸ್ಪಂದನ ಕಾರ್ಯಕ್ರವನ್ನು ನಡೆಸುತ್ತಿದ್ದು, ಈ ಹಿನ್ನೆಲೆಯಲ್ಲಿ ವಿಧಾನ ಸೌಧದ ಆವರಣದಲ್ಲಿರುವ ಕೆಂಗಲ್ ಹನುಮಂತಯ್ಯ ವೃತ್ತದಿಂದ ಗೇಟ್ ನಂಬರ್-04 ರವರಗೆ ಸಂಚಾರವನ್ನು ನಿಷೇಧಿಸಲಾಗಿರುತ್ತದೆ ಎಂದು ಸಂಚಾರಿ ಪೊಲೀಸರು ಪ್ರಕಟಣೆ ಹೊರಡಿಸಿದ್ದಾರೆ.

1. ವಾಹನ ಸಂಚಾರಕ್ಕೆ ಪರ್ಯಾಯ ಮಾರ್ಗವಾಗಿ ಡಿ. ದೇವರಾಜು ಅರಸು ರಸ್ತೆಯಲ್ಲಿ ಬರುವ ವಾಹನಗಳು ಎ.ಜಿ.ಎಸ್. ವೃತ್ತ ಮೂಲಕ ಎಂ.ಎಸ್. ಬಿಲ್ಡಿಂಗ್ ಒಳಭಾಗದಿಂದ ಪ್ರವೇಶಿಸಿ ಡಾ|| ಬಿ.ಆರ್. ಅಂಬೇಡ್ಕರ್ ರಸ್ತೆಯಲ್ಲಿ ಎಡ ತಿರುವು ಪಡೆದುಕದೊಂಡು ಸಂಚರಿಸುವುದು.

2. ಚಾಲುಕ್ಯ ವೃತ್ತದಿಂದ ಬರುವ ವಾಹನಗಳು ಸಿ.ಐ.ಡಿ. ಕಛೇರಿ ಮುಂಭಾಗವಾಗಿ ಚಲಿಸಿ ಮಹಾರಾಣಿ ಕಾಲೇಜು ಅಪ್ಪರ್ ಕ್ಯಾಂಪ್ ಮಾರ್ಗವಾಗಿ ಎಡ ತಿರುವು ಪಡೆದು ಕೆ.ಆರ್. ವೃತ್ತದಿಂದ ಅಂಬೇಡ್ಕರ್ ವೀದಿ / ಸಿಟಿ ಸಿವಿಲ್ ಕೋರ್ಟ್ ರಸ್ತೆಯನ್ನು ಉಪಯೋಗಿಸಬಹುದು.

ದಿ. 08.02.2024 ರಂದು ಬೆಳಿಗ್ಗೆ 6.00 ರಿಂದ ರಾತ್ರಿ 07-00 ರ ವರೆಗೆ ವಾಹನ ನಿಲುಗಡೆ
ನಿಷೇಧವಿರುವ ರಸ್ತೆಗಳ ವಿವರ:

1. ಡಾ. ಬಿ.ಆರ್ ಅಂಬೇಡ್ಕರ್ ರಸ್ತೆ,
2. ರಾಜಭವನ ರಸ್ತೆ, ಪ್ಯಾಲೇಸ್ ರಸ್ತೆ,
3. ಡಿ. ದೇವರಾಜು ಅರಸು ರಸ್ತೆ
4. ಶೇಷಾದ್ರಿ ರಸ್ತೆ.

ದಿ. 08.02.2024 ರಂದು ಸಾರ್ವಜನಿಕ ವಾಹನ ನಿಲುಗಡೆ ಸ್ಥಳಗಳು (ಸ್ಥಳ ಲಭ್ಯತೆಯ ಮೇಲೆ/ಪಾವತಿ ನಿಲುಗಡೆ)

*ಸ್ಕೌಟ್  ಮತ್ತು ಗೈಡ್ಸ್ ಪಾರ್ಕಿಂಗ್ ಸ್ಥಳ
*ಜ್ಞಾನ ಜ್ಯೋತಿ ಮತ್ತು ಬೆಂಗಳೂರು ವಿಶ್ವವಿಧ್ಯಾಲಯ ಪಾರ್ಕಿಂಗ್ ಸ್ಥಳ.
*ಸೆಂಟ್ರಲ್ ಕಾಲೇಜ್
*ಸ್ವಾತಂತ್ರ್ಯ ಉದ್ಯಾನವನ
*ಅರಮನೆ ಮೈದಾನ ಪಾರ್ಕಿಂಗ್ ಸ್ಥಳ

https://twitter.com/DCPTrWestBCP/status/1755204936974074027

 

 

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...