alex Certify ಮತ್ತೆ ಏರಿಕೆಯಾಯ್ತು ಕೊರೋನಾ, ಜಾರಿಯಾಯ್ತು ಕಠಿಣ ನಿಯಮ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮತ್ತೆ ಏರಿಕೆಯಾಯ್ತು ಕೊರೋನಾ, ಜಾರಿಯಾಯ್ತು ಕಠಿಣ ನಿಯಮ

ದೆಹಲಿಯಲ್ಲಿ ಕೊರೋನಾ ಹೊಸ ಪ್ರಕರಣ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಮತ್ತೆ ಕಠಿಣ ನಿರ್ಬಂಧ ಜಾರಿಗೆ ತರಲಾಗಿದೆ. ಮದುವೆಗೆ 50 ಜನರಿಗೆ ಮಾತ್ರ ಅವಕಾಶ ನೀಡಲಾಗಿದೆ.

ದೆಹಲಿ ಸರ್ಕಾರದ ಪ್ರಸ್ತಾವನೆಗೆ ಲೆಫ್ಟಿನೆಂಟ್ ಗವರ್ನರ್ ಒಪ್ಪಿಗೆ ಸೂಚಿಸಿದ್ದಾರೆ. ಈ ಮೊದಲು 200 ಜನ ಸೇರಲು ಅವಕಾಶ ನೀಡಲಾಗಿತ್ತು. ದೆಹಲಿಯಲ್ಲಿ ಕೊರೋನಾ ಮೂರನೇ ಅಲೆ ವ್ಯಾಪಕವಾಗಿ ಹರಡತೊಡಗಿದ್ದು, ಸೋಂಕಿತರ ಸಂಖ್ಯೆ ತೀವ್ರವಾಗಿ ಏರಿಕೆಯಾಗುತ್ತಿದೆ. ಇದರ ಪರಿಣಾಮ ಆಸ್ಪತ್ರೆಗಳಲ್ಲಿ ಬೆಡ್ ಕೊರತೆ ಕಂಡು ಬಂದಿದೆ.

ಸೋಂಕು ತಡೆಯುಗವ ನಿಟ್ಟಿನಲ್ಲಿ ಮತ್ತೆ ಕಠಿಣ ಕ್ರಮಕ್ಕೆ ಮುಂದಾಗಿರುವ ಸಿಎಂ ಅರವಿಂದ ಕೇಜ್ರಿವಾಲ್ ನೇತೃತ್ವದ ಸರ್ಕಾರ ನಿರ್ಬಂಧ ಹೇರತೊಡಗಿದೆ. ಮೊದಲ ಹಂತದಲ್ಲಿ ಮದುವೆಗೆ 50 ಜನರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...