alex Certify ಅಮಲಲ್ಲಿ ಪತ್ನಿ ಹೊಡೆದು ಕೊಂದು ಶವದೊಂದಿಗೆ ಎರಡು ದಿನ ಕಾಲ ಕಳೆದ ಕುಡುಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಮಲಲ್ಲಿ ಪತ್ನಿ ಹೊಡೆದು ಕೊಂದು ಶವದೊಂದಿಗೆ ಎರಡು ದಿನ ಕಾಲ ಕಳೆದ ಕುಡುಕ

ಭುವನೇಶ್ವರ: ಒಡಿಶಾದ ಭುವನೇಶ್ವರದಲ್ಲಿ 40 ವರ್ಷದ ವ್ಯಕ್ತಿಯೊಬ್ಬ ಪತ್ನಿಯನ್ನು ಕೊಂದು ಎರಡು ದಿನ ಶವದೊಂದಿಗೆ ಕಾಲ ಕಳೆದ ಘಟನೆ ಬೆಳಕಿಗೆ ಬಂದಿದೆ.

ಕುಡಿದ ಅಮಲಿನಲ್ಲಿ ತನ್ನ ಪತ್ನಿಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ನಂತರ ಮರದ ಹಲಗೆಯಿಂದ ಹೊಡೆದು ಕೊಂದಿದ್ದಾನೆ. ಮಂಗಳವಾರ ಮೈತ್ರಿ ವಿಹಾರ್ ಪೊಲೀಸ್ ಠಾಣೆ ವ್ಯಾಪ್ತಿಯ ತಾರಿಣಿ ನಗರದ ಕೊಳೆಗೇರಿಯಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಗಂಜಾಂ ಮೂಲದ ವ್ಯಕ್ತಿ ತನ್ನ ಪತ್ನಿ ಮತ್ತು ಮೂವರು ಪುತ್ರರೊಂದಿಗೆ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಕೊಲೆ ಮಾಡಿದ ನಂತರ ವ್ಯಕ್ತಿ ಶವವನ್ನು ಕೋಣೆಯಲ್ಲಿ ಬಚ್ಚಿಟ್ಟು ಎರಡು ದಿನಗಳ ಕಾಲ ವಾಸಿಸುತ್ತಿದ್ದ. ಗುರುವಾರ ಅವನ ಮಗನೊಬ್ಬನಿಂದ ವಿಷಯ ಬೆಳಕಿಗೆ ಬಂದಿದೆ.

ಮದ್ಯವ್ಯಸನಿ ಮಂಗಳವಾರ ಮಧ್ಯಾಹ್ನ ಕುಡಿದು ಬಂದಿದ್ದು, ಪತ್ನಿ ಅವಾಚ್ಯ ಪದಗಳಿಂದ ನಿಂದಿಸಲು ಆರಂಭಿಸಿದ್ದಾಳೆ. ಆಕೆಯ ವರ್ತನೆಯಿಂದ ಕೋಪಗೊಂಡ ವ್ಯಕ್ತಿ ಮರದ ಹಲಗೆಯಿಂದ ಅವಳನ್ನು ಹೊಡೆದು ಕೊಂದಿದ್ದಾನೆ. ಶವವನ್ನು ಕೋಣೆಯೊಂದರಲ್ಲಿ ಬಚ್ಚಿಟ್ಟು ಬೀಗ ಹಾಕಿದ್ದಾನೆ. ಗುರುವಾರ 19 ವರ್ಷದ ಹಿರಿಯ ಪುತ್ರ ಗಂಜಾಂನಲ್ಲಿರುವ ತಮ್ಮ ಸ್ಥಳೀಯ ಸ್ಥಳದಿಂದ ಮನೆಗೆ ಹಿಂತಿರುಗಿ ಶವ ಪತ್ತೆ ಮಾಡಿದ್ದು, ಬಳಿಕ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಆ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Tipy, jak ušetřit Za měsíc budete nepoznateľní: Táto Jak správně prát podprsenku, aby si nesedla Jak snížit hladinu kofeinu v Jak čistit závěsy bez jejich sundání: užitečné tipy pro hostesky Co dělat, když se