alex Certify ಆದಾಯ ಮೀರಿ ಅಕ್ರಮ ಆಸ್ತಿ ಗಳಿಸಿದ ಅಧಿಕಾರಿಗೆ ಬಿಗ್ ಶಾಕ್: ಲೋಕಾಯುಕ್ತ ಶಿಫಾರಸು ಹಿನ್ನಲೆ ತಹಶೀಲ್ದಾರ್ ಸಸ್ಪೆಂಡ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆದಾಯ ಮೀರಿ ಅಕ್ರಮ ಆಸ್ತಿ ಗಳಿಸಿದ ಅಧಿಕಾರಿಗೆ ಬಿಗ್ ಶಾಕ್: ಲೋಕಾಯುಕ್ತ ಶಿಫಾರಸು ಹಿನ್ನಲೆ ತಹಶೀಲ್ದಾರ್ ಸಸ್ಪೆಂಡ್

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಆರೋಪ ಮೇಲ್ನೋಟಕ್ಕೆ ಸಾಬೀತಾದ ಹಿನ್ನೆಲೆಯಲ್ಲಿ ಶಿವಮೊಗ್ಗ ತಹಶೀಲ್ದಾರ್ ಡಾ.ಎನ್.ಜಿ. ನಾಗರಾಜ್ ಅವರನ್ನು ಅಮಾನತು ಮಾಡಿ ಕಂದಾಯ ಇಲಾಖೆ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.

ಲೋಕಾಯುಕ್ತ ಪೊಲೀಸ್ ಮಹಾ ನಿರ್ದೇಶಕರ ಶಿಫಾರಸು ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲಾಗಿದೆ. ಏಪ್ರಿಲ್ 24ರಂದು ಎನ್.ಜಿ. ನಾಗರಾಜ್ ನಿವಾಸದ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿತ್ತು. ದಾಳಿಯ ಸಂದರ್ಭದಲ್ಲಿ ಅವರು ಹೊಳಲ್ಕೆರೆ ತಹಶೀಲ್ದಾರ್ ಆಗಿದ್ದರು.

ಆದಾಯಕ್ಕಿಂತ ಶೇಕಡ 138.37ರಷ್ಟು ಹೆಚ್ಚು ಆಸ್ತಿ ಹೊಂದಿರುವುದು ಪತ್ತೆಯಾಗಿತ್ತು. ಚನ್ನಗಿರಿ, ಶಿಕಾರಿಪುರದಲ್ಲಿರುವ ಮನೆ, ಹೊಳಲ್ಕೆರೆಯ ಕಚೇರಿ ಮತ್ತು ವಸತಿಗೃಹದ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...