alex Certify BREAKING : ಸಚಿವ ‘ಚಲುವರಾಯಸ್ವಾಮಿ’ ವಿರುದ್ಧ ಅಧಿಕಾರಿಗಳ ಪತ್ರ ಪ್ರಕರಣ : ‘ಸಿಐಡಿ’ ತನಿಖೆಗೆ ವಹಿಸಲು ರಾಜ್ಯ ಸರ್ಕಾರ ತೀರ್ಮಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಸಚಿವ ‘ಚಲುವರಾಯಸ್ವಾಮಿ’ ವಿರುದ್ಧ ಅಧಿಕಾರಿಗಳ ಪತ್ರ ಪ್ರಕರಣ : ‘ಸಿಐಡಿ’ ತನಿಖೆಗೆ ವಹಿಸಲು ರಾಜ್ಯ ಸರ್ಕಾರ ತೀರ್ಮಾನ

ಬೆಂಗಳೂರು : ಕೃಷಿ ಸಚಿವ ಚಲುವರಾಯಸ್ವಾಮಿ ವಿರುದ್ಧ ಅಧಿಕಾರಿಗಳ ಪತ್ರ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

ಕೃಷಿ ಸಚಿವ ಚಲುವರಾಯಸ್ವಾಮಿ ವಿರುದ್ಧ ಅಧಿಕಾರಿಗಳು ಬರೆದ ಪತ್ರ ನಕಲಿಯೋ ಅಸಲಿಯೋ ಗೊತ್ತಾಗಿಲ್ಲ.ಸದ್ಯ ಈ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಹಾಗೂ ಗೃಹ ಸಚಿವರು ಚರ್ಚೆ ನಡೆಸಿದ್ದಾರೆ ಎನ್ನಲಾಗಿದ್ದು, ಈ ಬಗ್ಗೆ ಅಧಿಕೃತ ಆದೇಶ ಹೊರಬೀಳಬೇಕಾಗಿದೆ.

ಲಂಚಕ್ಕೆ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಿ ಮಂಡ್ಯ ಜಿಲ್ಲೆಯ 7 ಸಹಾಯಕ ಕೃಷಿ ನಿರ್ದೇಶಕರು ರಾಜ್ಯಪಾಲರಿಗೆ ದೂರು ನೀಡಿದ್ದಾರೆ.ಕೃಷಿ ಸಚಿವ ಚಲುವರಾಯಸ್ವಾಮಿ ಅವರು ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಿ ಮಂಡ್ಯಜಿಲ್ಲೆಯ ಮಂಡ್ಯ, ಮಳವಳ್ಳಿ, ಕೆ.ಆರ್. ಪೇಟೆ, ಪಾಂಡವಪುರ, ಶ್ರೀರಂಗಪಟ್ಟಣ, ನಾಗಮಂಗಲ, ಮದ್ದೂರು ಸಹಾಯಕ ಕೃಷಿ ಅಧಿಕಾರಿಗಳು ರಾಜ್ಯಪಾಲರಿಗೆ ದೂರು ನೀಡಿದ್ದಾರೆ.ಸಚಿವ ಚಲುವರಾಯಸ್ವಾಮಿ ಅವರು 6 ರಿಂದ 8 ಲಕ್ಷ ರೂ.ವರೆಗೆ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ. ಲಂಚಕ್ಕೆ ಕಡಿವಾಣ ಹಾಕದಿದ್ದರೆ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

 

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...