alex Certify ಹಿಮಚ್ಛಾದಿತ ಪ್ರದೇಶದಲ್ಲಿ ನಿಲ್ಲಿಸಿದ್ದ ಎಲೆಕ್ಟ್ರಿಕ್ ಸ್ಕೂಟರ್ ಫೋಟೋ ಹಂಚಿಕೊಂಡ ಓಲಾ ಸಿಇಓ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಿಮಚ್ಛಾದಿತ ಪ್ರದೇಶದಲ್ಲಿ ನಿಲ್ಲಿಸಿದ್ದ ಎಲೆಕ್ಟ್ರಿಕ್ ಸ್ಕೂಟರ್ ಫೋಟೋ ಹಂಚಿಕೊಂಡ ಓಲಾ ಸಿಇಓ

ಇತ್ತೀಚೆಗೆ ದೇಶಾದ್ಯಂತ ಕೆಲವೆಡೆ ಓಲಾ ಎಲೆಕ್ಟ್ರಿಕ್ ಸ್ಕೂಟರ್ ಗಳಲ್ಲಿ ಬೆಂಕಿ ಕಾಣಿಸಿಕೊಂಡು ಉರಿದ ಪ್ರಕರಣಗಳು ದಾಖಲಾಗಿದ್ದರಿಂದ ಕಂಪನಿಯು ಸ್ಕೂಟರ್ ಗಳನ್ನು ಹಿಂಪಡೆದಿತ್ತು.

ಇದರ ಬೆನ್ನಲ್ಲೇ ಇದೀಗ ಕಂಪನಿಯ ಸಹ-ಸಂಸ್ಥಾಪಕ ಭವೀಶ್ ಅಗರ್ವಾಲ್ ಹಿಮಚ್ಛಾದಿತ ಪ್ರದೇಶದಲ್ಲಿ ಐದು ಓಲಾ ಸ್ಕೂಟರ್ ಗಳನ್ನು ನಿಲ್ಲಿಸಿ ಫೋಟೋ ತೆಗೆದು ತಮ್ಮ ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋಗೆ ಅವರು `Incredible India!’ ಎಂಬ ಶೀರ್ಷಿಕೆಯನ್ನು ನೀಡಿದ್ದಾರೆ.

ಆದರೆ, ಅವರ ಈ ಟ್ವಿಟ್ಟರ್ ಗೆ ಸಾಕಷ್ಟು ಜನ ನೆಟ್ಟಿಗರು ಟೀಕಾಪ್ರಹಾರವನ್ನೇ ಮಾಡಿದ್ದಾರೆ. “ಹಿಮವಿರುವ ಜಾಗದಲ್ಲಿ ನಿಲ್ಲಿಸಿರುವ ಸ್ಕೂಟರ್ ಗಳಿಗೆ ಬೆಂಕಿ ಹತ್ತಿಕೊಂಡಾಗ ಅಲ್ಲಿನ ವಾತಾವರಣ ನಿಮ್ಮನ್ನು ಬಿಸಿ ಮಾಡುತ್ತದೆ’’ ಎಂದು ನೆಟ್ಟಿಗರೊಬ್ಬರು ಕಾಲೆಳೆದಿದ್ದಾರೆ.

ಹೋಟೆಲ್ ಬಾಲ್ಕನಿಯಿಂದ ಜಿರಾಫೆಗೆ ಆಹಾರವುಣಿಸಿದ ಮಹಿಳೆ: ವಿಡಿಯೋ ವೈರಲ್

ಹೀಗೆಯೇ ಟೀಕಾಪ್ರಹಾರಗಳು ಮುಂದುವರಿದಿದ್ದು, “ಹಿಮಾಲಯದಲ್ಲಿ ಬಿಸಿ ಗಾಳಿ”, “ಅಗ್ನಿ & ಮಂಜು ಹಾಡು’’ ಎಂದೆಲ್ಲಾ ಓಲಾ ಕಂಪನಿಯ ಸಿಇಒ ರನ್ನು ಲೇವಡಿ ಮಾಡಿದ್ದಾರೆ.

ಈ ರೀತಿಯಾದ ಟೀಕೆಗಳು ನಡೆಯುತ್ತಿದ್ದು, ಭವೀಶ್ ಅವರ ಫೋಟೋ ಸಾಕಷ್ಟು ಟ್ರೆಂಡ್ ಆಗುತ್ತಿದೆ. ಕೆಲವು ಸ್ಕೂಟರ್‌ ಗಳಲ್ಲಿ ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಓಲಾ ಕಂಪನಿ ತನ್ನ 1441 ಎಲೆಕ್ಟ್ರಿಕ್ ಸ್ಕೂಟರ್ ಗಳನ್ನು ವಾಪಸ್ ತೆಗೆದುಕೊಂಡಿತ್ತು. ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಹೇಳಿಕೆ ನೀಡಿತ್ತು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...