ಬಿಹಾರ: ಬೈಕ್ನಲ್ಲಿ ಬಂದ ಇಬ್ಬರು ವ್ಯಕ್ತಿಗಳು ಹಗಲು ಹೊತ್ತಿನಲ್ಲಿ ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಲು ಪ್ರಯತ್ನಿಸಿರುವ ಭಯಾನಕ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಬಿಹಾರದ ಸಹರ್ಸಾದಲ್ಲಿ ನಡೆದಿರುವ ಇದರ ವಿಡಿಯೋ ವೈರಲ್ ಆಗಿದೆ.
ಸದರ್ ಪೊಲೀಸ್ ಠಾಣೆ ವ್ಯಾಪ್ತಿಯ ಕೃಷ್ಣನಗರ ಪ್ರದೇಶದಲ್ಲಿ ಬುಧವಾರ ಮಧ್ಯಾಹ್ನ 3 ಅಥವಾ 4 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ದುಷ್ಕರ್ಮಿಗಳು ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ವ್ಯಕ್ತಿಯ ಮೇಲೆ ಸೇಡು ತೀರಿಸಿಕೊಳ್ಳಲು ಬಂದಿದ್ದರು. ಅಂಗಡಿಯ ಮಾಲೀಕ ಕುನಾಲ್ ಪಂಡಿತ್ ಮೇಲೆ ಗುಂಡು ಹಾರಿಸಿದ್ದಾರೆ.
ಬೈಕ್ನಲ್ಲಿ ಹಿಂದೆ ಕುಳಿತಿದ್ದ ವ್ಯಕ್ತಿ ಗುಂಡು ಹಾರಿಸುತ್ತಿರುವುದನ್ನು ಕಂಡ ಕುನಾಲ್ ಅವರು, ತಾವು ಕುಳಿತ ಕುರ್ಚಿಯಿಂದ ಕವರ್ ತೆಗೆದುಕೊಂಡು ಓಡಿಹೋಗುವುದನ್ನು ವಿಡಿಯೋದಲ್ಲಿ ನೋಡಬಹುದು. ಅಲ್ಲಿಯೇ ಇದ್ದ ಬಾಲಕಿಯೊಬ್ಬಳು ಭಯದಿಂದ ಓಡಿಹೋಗುವುದನ್ನು ಸಹ ಕಾಣಬಹುದಾಗಿದೆ. ಗುಂಡಿನ ಸದ್ದು ಕೇಳಿದ ಹಲವಾರು ಮಂದಿ ಮನೆಯಿಂದ ಹೊರಗೆ ಬಂದಿದ್ದಾರೆ. ಬೈಕ್ ಸವಾರರು ಓಡಿ ಹೋಗಿದ್ದಾರೆ.