alex Certify Caught on Cam | ತಂದೆ-ಮಕ್ಕಳನ್ನು ಅಪಹರಿಸಿದ ದುಷ್ಕರ್ಮಿಗಳು; ಕಾರು ಅಪಘಾತಕ್ಕೀಡಾಗುತ್ತಿದ್ದಂತೆ ಬಿಟ್ಟು ಪರಾರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Caught on Cam | ತಂದೆ-ಮಕ್ಕಳನ್ನು ಅಪಹರಿಸಿದ ದುಷ್ಕರ್ಮಿಗಳು; ಕಾರು ಅಪಘಾತಕ್ಕೀಡಾಗುತ್ತಿದ್ದಂತೆ ಬಿಟ್ಟು ಪರಾರಿ

ನವದೆಹಲಿ: ಇಂದು ಹಾಡಹಗಲೇ ವ್ಯಕ್ತಿಯೊಬ್ಬರು ಮತ್ತು ಅವರ ಇಬ್ಬರು ಪುತ್ರಿಯರನ್ನು ನಾಲ್ವರು ದುಷ್ಕರ್ಮಿಗಳು ಅಪಹರಿಸಿದ್ದಾರೆ. ಈ ವೇಳೆ ವಾಹನ ರಸ್ತೆ ಅಪಘಾತಕ್ಕೊಳಗಾದ ದುಷ್ಕರ್ಮಿಗಳು ಸ್ಥಳದಿಂದ ತಪ್ಪಿಸಿಕೊಂಡು ಓಡಿ ಹೋಗಿದ್ದಾರೆ. ದೆಹಲಿ ಸಮೀಪದ ಗೌತಮ್ ಬುದ್ ನಗರದಲ್ಲಿ ಈ ಘಟನೆ ನಡೆದಿದ್ದು, ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆಯಾಗಿದೆ.

ಸುಭಾಷ್ ಕಶ್ಯಪ್ ಎಂಬುವವರು ತನ್ನ ಇಬ್ಬರು ಮಕ್ಕಳನ್ನು ಶಾಲೆಯಿಂದ ಮನೆಗೆ ಕರೆದುಕೊಂಡು ಹೋಗುತ್ತಿದ್ದಾಗ ಅಪಹರಿಸಿದ್ದಾರೆ. ಕಶ್ಯಪ್ ಅವರು ಬಿಳಿ ಬ್ರಿಜಾ ಎಸ್‌ಯುವಿಯನ್ನು ಚಲಾಯಿಸುತ್ತಿರಬೇಕಾದ್ರೆ ಸೂರಜ್‌ಪುರ ಮುಖ್ಯ ಮಾರುಕಟ್ಟೆಯಲ್ಲಿ ಅವರನ್ನು ದುಷ್ಕರ್ಮಿಗಳು ಅಡ್ಡಗಟ್ಟಿದ್ದಾರೆ. ಕಿಡಿಗೇಡಿಗಳು ಕಶ್ಯಪ್ ಅವರ ಸ್ಕಾರ್ಪಿಯೊ ಎಸ್‌ಯುವಿಯನ್ನು ಹತ್ತಿ ತಂದೆ ಮತ್ತು ಮಕ್ಕಳನ್ನು ಬಲವಂತವಾಗಿ ಒತ್ತೆಯಾಳಾಗಿಸಿಕೊಂಡಿದ್ದಾರೆ.

ಕಶ್ಯಪ್ ಅವರನ್ನು ಥಳಿಸಿದ ದುಷ್ಕರ್ಮಿಗಳು ಕಾರನ್ನು ತಮಗೆ ಬೇಕಾದ ಕಡೆಗೆ ಓಡಿಸಲು ಪ್ರಯತ್ನಿಸಿದ್ದಾರೆ. ಆದರೆ. ಸ್ವಲ್ಪ ಮುಂದೆ ಕಾರು ಹೋಗುತ್ತಿದ್ದಂತೆ ಕಸದ ತೊಟ್ಟಿಗೆ ಡಿಕ್ಕಿ ಹೊಡೆದಿದೆ. ಈ ಪ್ರದೇಶವು ಜನಸಂದಣಿಯಿಂದ ಕೂಡಿದ ಮಾರುಕಟ್ಟೆಯಾಗಿದ್ರಿಂದ ಜನಸಂದಣಿ ಸೇರಿದೆ. ಈ ವೇಳೆ ಅಪಹರಣಕಾರರು ಕಾರಿನಿಂದ ಇಳಿದು ಓಡಿದ್ದಾರೆ. ಸ್ಥಳದಲ್ಲಿದ್ದ ಸಿಸಿ ಟಿವಿ ಕ್ಯಾಮರಾದಲ್ಲಿ ದುಷ್ಕರ್ಮಿಗಳು ಪರಾರಿಯಾಗುತ್ತಿರುವ ದೃಶ್ಯ ಸೆರೆಯಾಗಿದೆ.

ಈ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕಶ್ಯಪ್ ಅವರು ನಾಲ್ವರು ಪುರುಷರಲ್ಲಿ ಇಬ್ಬರನ್ನು ತಿಳಿದಿರುವುದಾಗಿ ಹೇಳಿದ್ದಾರೆ. ರೋಹಿತ್ ಮತ್ತು ಆಕಾಶ್ ಅವರೊಂದಿಗೆ ದೀರ್ಘಕಾಲದ ದ್ವೇಷವಿದ್ದು, ಎರಡು ತಿಂಗಳ ಹಿಂದೆ ಇಬ್ಬರ ನಡುವೆ ಜಗಳವಾಗಿತ್ತು ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...