alex Certify ಶಿವಮೊಗ್ಗ : ಜಿಲ್ಲೆಯಲ್ಲಿ ಈ ದಿನಗಳಂದು ಲೋಕಾಯುಕ್ತರಿಂದ ಸಾರ್ವಜನಿಕರ ಅಹವಾಲು ಸ್ವೀಕಾರ ಸಭೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಿವಮೊಗ್ಗ : ಜಿಲ್ಲೆಯಲ್ಲಿ ಈ ದಿನಗಳಂದು ಲೋಕಾಯುಕ್ತರಿಂದ ಸಾರ್ವಜನಿಕರ ಅಹವಾಲು ಸ್ವೀಕಾರ ಸಭೆ

ಶಿವಮೊಗ್ಗ : ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗದ ಜಿಲ್ಲಾ ಅಧಿಕಾರಿಗಳು ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಡಿಸೆಂಬರ್-2023ರ ಮಾಹೆಯ ಕೆಳಕಂಡ ದಿನಗಳಂದು ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 01 ಗಂಟೆಯವರೆಗೆ ಸಾರ್ವಜನಿಕರ ಕುಂದು ಕೊರತೆ ಅರ್ಜಿ ಸ್ವೀಕಾರ ಸಭೆ ನಡೆಸಲಿದ್ದಾರೆ.

ಡಿ. 19 ರಂದು ಹೊಸನಗರ ತಾಲೂಕು ಕಚೇರಿ ಸಭಾಂಗಣ ಮತ್ತು ಸಾಗರ ತಾಲೂಕು ಪಂಚಾಯತ್ ಸಭಾಂಗಣ, ಡಿ. 20 ರಂದು ಸೊರಬ ತಾಲೂಕು ಕಚೇರಿ ಸಭಾಂಗಣ ಮತ್ತು ಶಿಕಾರಿಪುರ ತಾಲೂಕು ಕಚೇರಿ ಸಭಾಂಗಣ, ಡಿ. 21 ರಂದು ತೀರ್ಥಹಳ್ಳಿ ತಾಲೂಕು ಕಚೇರಿ ಸಭಾಂಗಣ ಮತ್ತು ಭದ್ರಾವತಿ ತಾಲೂಕು ಪಂಚಾಯತ್ ಸಭಾಂಗಣ ಹಾಗೂ ಡಿ. 27 ರಂದು ಶಿವಮೊಗ್ಗ ತಾಲೂಕು ಪಂಚಾಯತ್ ಸಭಾಂಗಣಗಳಲ್ಲಿ ಸಭೆ ನಡೆಯಲಿದೆ.

ಸರ್ಕಾರಿ ಕರ್ತವ್ಯ ನಿರ್ವಹಿಸಲು ಬೇಜವಾಬ್ಧಾರಿತನ, ನಿರ್ಲಕ್ಷ್ಯ, ಅನಗತ್ಯ ವಿಳಂಬ ಮತ್ತು ಅಧಿಕೃತ ಕೆಲಸಕ್ಕಾಗಿ ಲಂಚಕ್ಕೆ ಬೇಡಿಕೆ ಇಟ್ಟಂತಹ ಅಧಿಕಾರಿ ಹಾಗೂ ಸಿಬ್ಬಂದಿಗಳ ವಿರುದ್ಧ ಸಾರ್ವಜನಿಕರು ಲಿಖಿತ ಅಹವಾಲು ಸಲ್ಲಿಸುವಂತೆ ಶಿವಮೊಗ್ಗದ ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...