alex Certify ಒನಕೆ ಓಬವ್ವ ಹೆಸರಲ್ಲಿ ನಿಗಮ, ಕಾಲೇಜು, ಅಧ್ಯಯನ ಕೇಂದ್ರ ಸ್ಥಾಪನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಒನಕೆ ಓಬವ್ವ ಹೆಸರಲ್ಲಿ ನಿಗಮ, ಕಾಲೇಜು, ಅಧ್ಯಯನ ಕೇಂದ್ರ ಸ್ಥಾಪನೆ

ಚಿತ್ರದುರ್ಗ: ಮುಂದಿನ ಬಜೆಟ್ ನಲ್ಲಿ ವೀರ ವನಿತೆ ಒನಕೆ ಓಬವ್ವನ ಹೆಸರಿನಲ್ಲಿ ನಿಗಮ ಸ್ಥಾಪನೆ ಬಗ್ಗೆ ಘೋಷಣೆ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಚಿತ್ರದುರ್ಗದಲ್ಲಿ ಇದೇ ಮೊದಲ ಬಾರಿಗೆ ಆಯೋಜಿಸಿದ್ದ ರಾಜ್ಯಮಟ್ಟದ ಒನಕೆ ಓಬವ್ವ ಜಯಂತಿಗೆ ಚಾಲನೆ ನೀಡಿ ಮಾತನಾಡಿದ ಸಿಎಂ, ಒನಕೆ ಓಬವ್ವನ ಹೆಸರಿನಲ್ಲಿ ಅಧ್ಯಯನ ಪೀಠ, ಕಾಲೇಜು ತೆರೆಯಲಾಗುವುದು ಎಂದು ತಿಳಿಸಿದ್ದಾರೆ.

ರಾಜ್ಯದ ಯಾವುದಾದರೂ ಒಂದು ವಿಶ್ವವಿದ್ಯಾಲಯದಲ್ಲಿ ಒನಕೆ ಓಬವ್ವ ಹೆಸರಿನ ಅಧ್ಯಯನ ಪೀಠ ಆರಂಭಿಸಲಾಗುವುದು. ಕಾಲೇಜು ಕೂಡ ತೆರೆಯಲಾಗುವುದು. ಒನಕೆ ಓಬವ್ವ ಟ್ರಸ್ಟ್ ಗೆ ಚಿತ್ರದುರ್ಗದಲ್ಲಿ 80 ಎಕರೆ ಜಮೀನು ಕೇಳಿದ್ದು, ವರದಿ ಸಲ್ಲಿಸಲು ಜಿಲ್ಲಾಧಿಕಾರಿಗೆ ಸೂಚಿಸಲಾಗಿದೆ. ಪ್ರಸ್ತಾವನೆ ಬಂದ ನಂತರ ಜಮೀನು ಮಂಜೂರು ಮಾಡಲಾಗುವುದು ಎಂದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...