alex Certify ಬೇಕರಿಗೆ ನುಗ್ಗಿ ಹಲ್ಲೆ ಮಾಡಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಪಕ್ಕದ ಅಂಗಡಿ ಮಾಲೀಕನಿಂದಲೇ ಸುಪಾರಿ…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೇಕರಿಗೆ ನುಗ್ಗಿ ಹಲ್ಲೆ ಮಾಡಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಪಕ್ಕದ ಅಂಗಡಿ ಮಾಲೀಕನಿಂದಲೇ ಸುಪಾರಿ…!

ಬೆಂಗಳೂರಿನ ಕುಂದನಹಳ್ಳಿ ಬಳಿ ಇತ್ತೀಚೆಗೆ ಬೇಕರಿಯೊಂದಕ್ಕೆ ನುಗ್ಗಿದ್ದ ಪುಂಡರ ಗುಂಪು ಬೈಂದೂರು ಮೂಲದ ಇಬ್ಬರು ಯುವಕರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿತ್ತು. ಸಿಗರೇಟು ಕೇಳುವ ನೆಪದಲ್ಲಿ ಈ ಗುಂಪು ಬೇಕರಿ ಒಳಗೆ ನುಗ್ಗಿ ಅಲ್ಲಿದ್ದ ವಸ್ತುಗಳನ್ನು ಧ್ವಂಸ ಮಾಡಿತ್ತು.

ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಆ ಬಳಿಕ ಎಚ್ಎಎಲ್ ಪೊಲೀಸರು ಹಲ್ಲೆ ನಡೆಸಿದ್ದ ನಾಲ್ವರನ್ನು ಬಂಧಿಸಿ ಕ್ರಮ ಕೈಗೊಂಡಿದ್ದರು. ಅವರುಗಳ ವಿಚಾರಣೆ ವೇಳೆ ಮತ್ತೊಂದು ಶಾಕಿಂಗ್ ಮಾಹಿತಿ ಬಹಿರಂಗವಾಗಿದೆ.

ಈ ಬೇಕರಿ ಎದುರುಗಡೆ ಟಿ ಅಂಗಡಿ ಇಟ್ಟುಕೊಂಡಿದ್ದ ಮಂಜುನಾಥ್ ಎಂಬಾತ ಬೇಕರಿ ಕಾರಣದಿಂದಾಗಿ ತನಗೆ ವ್ಯಾಪಾರ ಕಡಿಮೆಯಾಗುತ್ತಿದೆ ಎಂದು ಪುಂಡರಿಗೆ ಸುಪಾರಿ ನೀಡಿ ಹಲ್ಲೆ ಮಾಡಿಸಿದ್ದ ಎಂಬ ಸಂಗತಿ ಬೆಳಕಿಗೆ ಬಂದಿದೆ. ಇದೀಗ ಮಂಜುನಾಥ್ ಸೇರಿದಂತೆ ಐವರನ್ನು ಬಂಧಿಸಲಾಗಿದ್ದು, ಪರಾರಿಯಾಗಿರುವ ಮತ್ತಿಬ್ಬರನ್ನು ವಶಕ್ಕೆ ಪಡೆಯಲು ಕಾರ್ಯಾಚರಣೆ ನಡೆಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...