alex Certify ಕೇರಳದಿಂದ ಆಗಮಿಸುವವರಿಗೆ ಸಾಂಸ್ಥಿಕ ಕ್ವಾರಂಟೈನ್​ ಕಡ್ಡಾಯಗೊಳಿಸಿದ ರಾಜ್ಯ ಸರ್ಕಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೇರಳದಿಂದ ಆಗಮಿಸುವವರಿಗೆ ಸಾಂಸ್ಥಿಕ ಕ್ವಾರಂಟೈನ್​ ಕಡ್ಡಾಯಗೊಳಿಸಿದ ರಾಜ್ಯ ಸರ್ಕಾರ

ಹೆಚ್ಚುತ್ತಿರುವ ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಕೇರಳದಿಂದ ರಾಜ್ಯಕ್ಕೆ ಆಗಮಿಸುವ ಪ್ರತಿಯೊಬ್ಬರೂ 1 ವಾರಗಳ ಕಾಲ ಸಾಂಸ್ಥಿಕ ಕ್ವಾರಂಟೈನ್​ಗೆ ಒಳಗಾಗಬೇಕು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್​ ಹೇಳಿದ್ದಾರೆ. ಬೆಂಗಳೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು ಕೇರಳದಲ್ಲಿ ಸೋಂಕು ಗಣನೀಯ ಪ್ರಮಾಣದಲ್ಲಿ ಏರಿಕೆ ಕಂಡುಬರ್ತಿರೋ ಹಿನ್ನೆಲೆಯಲ್ಲಿ ಈ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಅಂತಂದ್ರು.

ಸಾಂಸ್ಥಿಕ ಕ್ವಾರಂಟೈನ್​​​​ಗೆಂದೇ ಬೆಂಗಳೂರಿನ ಹಲವೆಡೆ ಸೆಂಟರ್​ಗಳನ್ನು ತೆರೆಯಲಾಗಿದೆ. ಆದರೆ ಕ್ವಾರಂಟೈನ್​ ವೆಚ್ಚವನ್ನು ಸಂಬಂಧಪಟ್ಟ ವ್ಯಕ್ತಿಗಳೇ ಭರಿಸಬೇಕು ಎಂತಲೂ ಇದೇ ವೇಳೆ ಮಾಹಿತಿ ನೀಡಿದ್ರು.

ಇನ್ನು ಲಸಿಕಾ ಅಭಿಯಾನದ ಕುರಿತು ಮಾತನಾಡಿದ ಅವರು ಬೆಂಗಳೂರು ಜಿಲ್ಲೆಯಲ್ಲಿ 100 ಪ್ರತಿಶತ ಸಿಂಗಲ್​ ಡೋಸ್​ ಲಸಿಕೆ ಹಂಚಿಕೆ ಪೂರ್ಣಗೊಂಡಿದೆ ಎಂದು ಮಾಹಿತಿ ನೀಡಿದ್ರು. ಅಲ್ಲದೇ ರಾಜ್ಯದಲ್ಲಿ ಕೊರೊನಾ ಲಸಿಕೆಯ ಅಭಾವ ಇಲ್ಲ ಎಂತಲೂ ಇದೇ ವೇಳೆ ಸ್ಪಷ್ಟನೆ ನೀಡಿದ್ರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...