alex Certify ‘ಆಪರೇಷನ್ ಹಸ್ತ’ ಆಗಲ್ಲ, ‘ಆಪರೇಷನ್ ಕಮಲ’ ಆಗುತ್ತೆ : ಮಾಜಿ ಸಚಿವ ಮುರುಗೇಶ್ ನಿರಾಣಿ ಸ್ಪೋಟಕ ಹೇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಆಪರೇಷನ್ ಹಸ್ತ’ ಆಗಲ್ಲ, ‘ಆಪರೇಷನ್ ಕಮಲ’ ಆಗುತ್ತೆ : ಮಾಜಿ ಸಚಿವ ಮುರುಗೇಶ್ ನಿರಾಣಿ ಸ್ಪೋಟಕ ಹೇಳಿಕೆ

ಬೆಂಗಳೂರು : ಆಪರೇಷನ್ ಹಸ್ತ ಆಗಲ್ಲ, ಆಪರೇಷನ್ ಕಮಲ ಆಗುತ್ತದೆ, ಕಾದು ನೋಡಿ ಎಂದು ಮಾಜಿ ಸಚಿವ ಮುರುಗೇಶ್ ನಿರಾಣಿ ಸ್ಪೋಟಕ ಹೇಳಿಕೆ ನೀಡಿದ್ದಾರೆ.

ಜಿಲ್ಲೆಯ ಬಾದಾಮಿ ತಾಲೂಕಿನ ಕೆರಕಲಮಟ್ಟಿ ಗ್ರಾಮದಲ್ಲಿ ಮಾತನಾಡಿದ ಮಾಜಿ ಸಚಿವ ಮುರುಗೇಶ್ ನಿರಾಣಿ ರಾಜ್ಯ ಸರ್ಕಾರದ ವಿರುದ್ಧ ವಾಗ್ಧಾಳಿ ನಡೆಸಿದರು. ಬೇಕಾದರೆ ಕಾದು ನೋಡಿ ಇನ್ನೂ 2-3 ತಿಂಗಳಲ್ಲಿ ಕಾಂಗ್ರೆಸ್ ಸರ್ಕಾತ ಪತನವಾಗಲಿದೆ. ಆಪರೇಷನ್ ಹಸ್ತ ಆಗಲ್ಲ, ಆಪರೇಷನ್ ಕಮಲ ಆಗುತ್ತದೆ ಎಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ.

ಎಂ ಎಲ್ ಎ ಟಿಕೆಟ್ ಕೊಡಲ್ಲ, ಕೆಲಸ ಮಾಡಿ ಅಂದ್ರೂ ಮಾಡ್ತೀನಿ. ಪಕ್ಷಕ್ಕಾಗಿ ಕೆಲಸ ಮಾಡುತ್ತೇನೆ. ಕಳೆದ ಬಾರಿ ಕೂಡ ನಾನು ಇದನ್ನೇ ಹೇಳಿದ್ದೇ ಎಂದರು. ಉಚಿತ ಬಸ್ ಯೋಜನೆಯಿಂದ ಶಾಲಾ ಮಕ್ಕಳಿಗೆ ಬಹಳ ತೊಂದರೆಯಾಗಿದೆ. ಶಾಲಾ ಮಕ್ಕಳು ಹಾಗೂ ದಿನನಿತ್ಉ ಕೆಲಸಕ್ಕೆ ಹೋಗುವವರಿಗೆ ಬಸ್ ಕುಳಿತುಕೊಳ್ಳಲು ಸೀಟ್ ಸಿಗುತ್ತಿಲ್ಲ, ಬಸ್ ಗಳು ರಶ್ ಆಗಿರುತ್ತದೆ ಎಂದರು. ಉಚಿತ ವಿದ್ಯುತ್ ಯೋಜನೆಯಿಂದ ಮನೆ ಸಣ್ಣ ಕೈಗಾರಿಕೆಗಳಿಗೆ ಕನಿಷ್ಠ 60% ಗಿಂತಲೂ ಹೆಚ್ಚುವರಿ ಬಿಲ್ ಬರುತ್ತಿದೆ ಎಂದು ಸಚಿವ ಮುರುಗೇಶ್ ನಿರಾಣಿ ಹೇಳಿಕೆ ನೀಡಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...