7ನೇ ವೇತನ ಆಯೋಗದಲ್ಲಿ ಒಪಿಎಸ್ ಅನುಷ್ಠಾನಕ್ಕೆ 7 ದಿನ ಗಡುವು: ಮಾ. 1 ರಿಂದಲೇ ಕರ್ತವ್ಯಕ್ಕೆ ಗೈರು ಹಾಜರಾಗಲು ಸರ್ಕಾರಿ ನೌಕರರ ನಿರ್ಧಾರ

ಬೆಂಗಳೂರು: 7ನೇ ವೇತನ ಆಯೋಗದಲ್ಲಿ ಒಪಿಎಸ್ ಅನುಷ್ಠಾನಗೊಳಿಸಬೇಕೆಂದು ರಾಜ್ಯ ಸರ್ಕಾರಕ್ಕೆ ಸರ್ಕಾರಿ ನೌಕರರು 7 ದಿನಗಳ ಗಡುವು ನೀಡಿದ್ದಾರೆ.

ಫೆಬ್ರವರಿ 22 ರಿಂದ ಫೆಬ್ರವರಿ 28 ರ ವರೆಗೆ ರಾಜ್ಯ ಸರ್ಕಾರಿ ನೌಕರರು ಗಡುವು ನೀಡಿದ್ದು, ಗಡುವಿಗೆ ಸರ್ಕಾರ ಸ್ಪಂದಿಸದಿದ್ದರೆ ಅನಿರ್ದಿಷ್ಟಾವಧಿ ಹೋರಾಟ ನಡೆಸಲಾಗುವುದು. ಮಾರ್ಚ್ 1 ರಿಂದಲೇ ಕರ್ತವ್ಯಕ್ಕೆ ಗೈರುಹಾಜರಾಗಲು ಸರ್ಕಾರಿ ನೌಕರರು ನಿರ್ಧರಿಸಿದ್ದಾರೆ. ನೌಕರರ ಸಂಘದ ತುರ್ತು ಕಾರ್ಯಕಾರಿಣಿ ಸಭೆಯಲ್ಲಿ ಈ ಕುರಿತಾಗಿ ನಿರ್ಧಾರ ಕೈಗೊಳ್ಳಲಾಗಿದೆ ಎಂದು ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎ.ಸ್ ಷಡಕ್ಷರಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಮುಖ್ಯಮಂತ್ರಿಗಳು, ಮುಖ್ಯ ಕಾರ್ಯದರ್ಶಿಗಳಿಗೆ ತಿಳಿವಳಿಕೆ ಮತ್ತು ಮನವಿ ಪತ್ರ ಸಲ್ಲಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಅಲ್ಲದೇ, ಮಾರ್ಚ್ 1 ರಿಂದ ಬೆಂಗಳೂರಿನಲ್ಲಿ ಕಸ ಎತ್ತದಿರಲು ನಿರ್ಧರಿಸಲಾಗಿದೆ ಎಂದು ಬಿಬಿಎಂಪಿ ನೌಕರರ ಸಂಘದ ಅಧ್ಯಕ್ಷ ಅಮೃತರಾಜ್ ಮಾಹಿತಿ ನೀಡಿದ್ದಾರೆ. ಹಳೆ ಪಿಂಚಣಿ ನೀತಿ ಜಾರಿಗೆ ಒತ್ತಾಯಿಸಿ ಪ್ರತಿಭಟನೆ ತೀವ್ರಗೊಳಿಸಲು ತೀರ್ಮಾನಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read