
ನವದೆಹಲಿ: ಮತದಾನದ ಹಕ್ಕನ್ನು ಪಡೆಯಲು ಮಹಿಳೆಯರು ನಡೆಸುತ್ತಿರುವ ಹೋರಾಟವನ್ನು ಸ್ಮರಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು, ಹೆಣ್ಣುಮಕ್ಕಳು ನಮ್ಮ ರಾಷ್ಟ್ರದ ದೊಡ್ಡ ಭರವಸೆ. ದೇಶದ ಬಗ್ಗೆ ನಮ್ಮ ಹೆಣ್ಣುಮಕ್ಕಳು ದೊಡ್ಡ ಭರವಸೆ ಹೊಂದಿದ್ದಾರೆ ಎಂದು ಪ್ರತಿಪಾದಿಸಿದ್ದಾರೆ.
ಸ್ವಾತಂತ್ರ್ಯ ದಿನಾಚರಣೆಯ ಮುನ್ನಾದಿನದಂದು ದೇಶವನ್ನುದ್ದೇಶಿಸಿ ಮಾತನಾಡಿದ ಅವರು, ನಾವು ವಸಾಹತುಶಾಹಿ ಆಡಳಿತಗಾರರ ಸಂಕೋಲೆಯಿಂದ ಮುಕ್ತವಾಗಲು ಅಗಾಧ ತ್ಯಾಗ ಮಾಡಿದ ಹೋರಾಟಗಾರರನ್ನು ಸ್ಮರಿಸಿದರು.
ನಾಳೆ ವಸಾಹತುಶಾಹಿಗಳ ಸಂಕೋಲೆಯಿಂದ ನಮ್ಮನ್ನು ನಾವು ಮುಕ್ತಗೊಳಿಸಿದ ದಿನವನ್ನು ಆಚರಿಸುತ್ತೇವೆ. ನಾವು ಸ್ವತಂತ್ರ ಭಾರತದಲ್ಲಿ ಬದುಕಲು ಸಾಧ್ಯವಾಗುವಂತೆ ಅಪಾರ ತ್ಯಾಗ ಮಾಡಿದವರಿಗೆ ನಾವು ನಮಸ್ಕರಿಸುತ್ತೇವೆ. ಇತರ ಸುಸ್ಥಾಪಿತ ಪ್ರಜಾಪ್ರಭುತ್ವಗಳಲ್ಲಿ ಮಹಿಳೆಯರು ಮತದಾನದ ಹಕ್ಕನ್ನು ಪಡೆಯಲು ದೀರ್ಘಾವಧಿಯ ಹೋರಾಟಗಳನ್ನು ನಡೆಸಬೇಕಾಗಿತ್ತು. ಆದರೆ ಪ್ರಜಾಪ್ರಭುತ್ವದ ನಿಜವಾದ ಸಾಮರ್ಥ್ಯವನ್ನು ತಿಳಿಸಲು ಜಗತ್ತಿಗೆ ಸಹಾಯ ಮಾಡಿದ ಕೀರ್ತಿ ಭಾರತಕ್ಕೆ ಸಲ್ಲುತ್ತದೆ. ನಮ್ಮ ಹೆಣ್ಣುಮಕ್ಕಳು ರಾಷ್ಟ್ರದ ದೊಡ್ಡ ಭರವಸೆ ಎಂದು ಅವರು ಪ್ರತಿಪಾದಿಸಿದರು.
ಹಲವು ವೀರರು ಮತ್ತು ಅವರ ಹೋರಾಟಗಳನ್ನು ವಿಶೇಷವಾಗಿ ರೈತರು ಮತ್ತು ಬುಡಕಟ್ಟು ಜನಾಂಗದವರು ಮರೆತುಹೋಗಿದ್ದಾರೆ. ನವೆಂಬರ್ 15 ಅನ್ನು “ನಜಾತಿಯ ಗೌರವ್ ದಿವಸ್ ಎಂದು ಆಚರಿಸಲು ಸರ್ಕಾರದ ನಿರ್ಧರಿಸಿದೆ. ನಮ್ಮ ಬುಡಕಟ್ಟು ವೀರರು ಕೇವಲ ಸ್ಥಳೀಯ ಅಥವಾ ಪ್ರಾದೇಶಿಕ ಐಕಾನ್ ಗಳಲ್ಲ, ಆದರೆ ಇಡೀ ರಾಷ್ಟ್ರಕ್ಕೆ ಸ್ಫೂರ್ತಿಯಾಗಿರುವುದರಿಂದ ಸ್ವಾಗತಾರ್ಹ ಎಂದರು.
ಸ್ವಾತಂತ್ರ್ಯ ದಿನವನ್ನು ಆಚರಿಸುವಾಗ ನಾವು ನಮ್ಮ ‘ಭಾರತೀಯತೆ’ಯನ್ನು ಆಚರಿಸುತ್ತೇವೆ. ಭಾರತವು ವೈವಿಧ್ಯತೆಯಿಂದ ಕೂಡಿದೆ. ಆದರೆ, ನಾವೆಲ್ಲರೂ ಒಂದೇ ಎಂಬ ಸಾಮಾನ್ಯ ಮನೋಭಾವವಿದೆ. ಈ ಸಾಮಾನ್ಯ ಥ್ರೆಡ್ ನಮ್ಮನ್ನು ಒಟ್ಟಿಗೆ ಬಂಧಿಸುತ್ತದೆ. ‘ಏಕ್ ಭಾರತ್, ಶ್ರೇಷ್ಠ ಭಾರತ್’ ಎಂಬ ಮನೋಭಾವದೊಂದಿಗೆ ಒಟ್ಟಾಗಿ ನಡೆಯಲು ಪ್ರೇರೇಪಿಸುತ್ತದೆ ಎಂದರು.