alex Certify ರೈತ ಸಮುದಾಯಕ್ಕೆ ಬಿಗ್ ಶಾಕ್: ಪಹಣಿ ಬೆಲೆ ಹೆಚ್ಚಳ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈತ ಸಮುದಾಯಕ್ಕೆ ಬಿಗ್ ಶಾಕ್: ಪಹಣಿ ಬೆಲೆ ಹೆಚ್ಚಳ

ಪಹಣಿ ಬೆಲೆಯನ್ನು 10 ರೂಪಾಯಿ ಹೆಚ್ಚಳ ಮಾಡುವ ಮೂಲಕ ಸರ್ಕಾರ ರೈತರಿಗೆ ಶಾಕ್ ನೀಡಿದೆ. 15 ರೂಪಾಯಿ ಇದ್ದ ಪಹಣಿ ದರವನ್ನು 25 ರೂ.ಗೆ ಹೆಚ್ಚಳ ಮಾಡಲಾಗಿದೆ.

ಸಾಲ, ಆಸ್ತಿ ಮಾರಾಟ, ಸಬ್ಸಿಡಿ ಸೇರಿದಂತೆ ವಿವಿಧ ಸೌಲಭ್ಯಕ್ಕಾಗಿ ಪಹಣಿ ಅಗತ್ಯವಾಗಿದ್ದು, ರೈತರು 25 ರೂಪಾಯಿ ನೀಡಿ ಪಹಣಿ ಪಡೆದುಕೊಳ್ಳಬೇಕಿದೆ. ಸರ್ಕಾರದ ಸೌಲಭ್ಯ ಪಡೆದುಕೊಳ್ಳಲು ಪಹಣಿ ಕಡ್ಡಾಯಗೊಳಿಸಲಾಗಿದ್ದು, ಸಬ್ಸಿಡಿಗೆ ಅರ್ಜಿ ಸಲ್ಲಿಕೆ, ಆಸ್ತಿ ಮಾರಾಟ, ಬ್ಯಾಂಕುಗಳಲ್ಲಿ ಸಾಲ ಸೇರಿದಂತೆ ಹಲವು ಕಾರಣಕ್ಕೆ ಪಹಣಿ ಅಗತ್ಯವಾಗಿದ್ದು, ನಾಡಕಚೇರಿ, ತಹಶೀಲ್ದಾರ್ ಕಚೇರಿ, ಕಾಮನ್ ಸರ್ವೀಸ್ ಸೆಂಟರ್ ಗಳಲ್ಲಿ ರೈತರು ಪಹಣಿ ಪಡೆದುಕೊಳ್ಳಬೇಕಿದೆ. ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ಪಹಣಿಗೆ 5 ರೂ. ಶುಲ್ಕ ವಸೂಲಿ ಮಾಡಲಾಗುತ್ತಿದ್ದು, ಈಗ ಕಾಮನ್ ಸರ್ವಿಸ್ ಸೆಂಟರ್ ಗಳಲ್ಲಿ ಪಹಣಿ ಪಡೆಯಲು 30 ರೂಪಾಯಿ ಪಾವತಿಸಬೇಕಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...