alex Certify SHOCKING: ಕುರಾನ್ ಸುಟ್ಟು ಧರ್ಮ ನಿಂದನೆ ಮಾಡಿದ ವ್ಯಕ್ತಿಯನ್ನು ಠಾಣೆಗೆ ನುಗ್ಗಿ ಸಜೀವ ದಹನ ಮಾಡಿದ ಉದ್ರಿಕ್ತರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING: ಕುರಾನ್ ಸುಟ್ಟು ಧರ್ಮ ನಿಂದನೆ ಮಾಡಿದ ವ್ಯಕ್ತಿಯನ್ನು ಠಾಣೆಗೆ ನುಗ್ಗಿ ಸಜೀವ ದಹನ ಮಾಡಿದ ಉದ್ರಿಕ್ತರು

ವಾಯುವ್ಯ ಪಾಕಿಸ್ತಾನದ ಖೈಬರ್ ಪಖ್ತುಂಖ್ವಾದ ಸ್ವಾತ್ ಜಿಲ್ಲೆಯಲ್ಲಿ ಪವಿತ್ರ ಕುರಾನ್ ಅನ್ನು ಅಪವಿತ್ರಗೊಳಿಸಿದ್ದಾನೆಂದು ಆರೋಪಿಸಿ ಕೋಪಗೊಂಡ ಉದ್ರಿಕ್ತರ ಗುಂಪು ಒಬ್ಬ ವ್ಯಕ್ತಿಯನ್ನು ಕೊಂದಿದೆ. ನಂತರ ನಡೆದ ಗಲಾಟೆಯಲ್ಲಿ ಎಂಟು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪಂಜಾಬ್‌ ನ ಸಿಯಾಲ್‌ಕೋಟ್ ಜಿಲ್ಲೆಯ ವ್ಯಕ್ತಿ ಗುರುವಾರ ರಾತ್ರಿ ಸ್ವಾತ್‌ ನ ಮದ್ಯಾನ್ ತೆಹಸಿಲ್‌ನಲ್ಲಿ ಪವಿತ್ರ ಕುರಾನ್‌ ನ ಕೆಲವು ಪುಟಗಳನ್ನು ಸುಟ್ಟು ಹಾಕಿದ್ದಾನೆ ಎಂದು ಸ್ವಾತ್ ಜಿಲ್ಲಾ ಪೊಲೀಸ್ ಅಧಿಕಾರಿ(ಡಿಪಿಒ) ಜಹಿದ್ ಉಲ್ಲಾ ಹೇಳಿದ್ದಾರೆ.

ವ್ಯಕ್ತಿಯನ್ನು ವಶಕ್ಕೆ ಪಡೆದ ಪೊಲೀಸರು ಆತನನ್ನು ಪೊಲೀಸ್ ಠಾಣೆಗೆ ಸ್ಥಳಾಂತರಿಸಿದ್ದಾರೆ. ಆಕ್ರೋಶಗೊಂಡ ಜನರ ಗುಂಪೊಂದು ಪೊಲೀಸ್ ಠಾಣೆಯ ಮೇಲೆ ದಾಳಿ ಮಾಡಿ ಶಂಕಿತನನ್ನು ಕರೆದೊಯ್ದಿದೆ. ಗುಂಪು ಪೊಲೀಸ್ ಠಾಣೆ ಮತ್ತು ಮೊಬೈಲ್ ವಾಹನಕ್ಕೆ ಬೆಂಕಿ ಹಚ್ಚಿ ಶಂಕಿತ ವ್ಯಕ್ತಿಯನ್ನು ಸುಟ್ಟು ಹಾಕಿದೆ ಎಂದು ಡಿಪಿಒ ತಿಳಿಸಿದ್ದಾರೆ.

ಆರೋಪಿಯನ್ನು ಪೋಲೀಸ್ ಕಸ್ಟಡಿಗೆ ತೆಗೆದುಕೊಂಡರೂ, ಕೋಪಗೊಂಡ ರ್ಯಾಡಿಕಲ್ ಇಸ್ಲಾಮಿಕ್ ಜನಸಮೂಹವು ಅವನನ್ನು ಹೊರಗೆ ಎಳೆದುಕೊಂಡು ಜೀವಂತವಾಗಿ ಸುಟ್ಟುಹಾಕಿತು. ಗುಂಪು ಪೊಲೀಸ್ ಠಾಣೆಗೂ ಬೆಂಕಿ ಹಚ್ಚಿದೆ. ಘಟನೆಯಿಂದ ಉಂಟಾದ ಅಶಾಂತಿಯಲ್ಲಿ ಎಂಟು ಜನರು ಗಾಯಗೊಂಡಿದ್ದಾರೆ ಎಂದು ಜಹಿದ್ ಉಲ್ಲಾ ಹೇಳಿದರು.

ಮದ್ಯಾನದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಪರಿಸ್ಥಿತಿಯನ್ನು ಹತೋಟಿಗೆ ತರಲು ಪ್ರಯತ್ನಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ. ಮುಖ್ಯಮಂತ್ರಿ ಕೆಪಿಕೆ ಅಲಿ ಅಮೀನ್ ಗಂಡಾಪುರ ಅವರು ಘಟನೆಯ ಬಗ್ಗೆ ಪ್ರಾಂತೀಯ ಪೊಲೀಸ್ ಮುಖ್ಯಸ್ಥರಿಂದ ವರದಿ ಕೇಳಿದ್ದಾರೆ.

ಪರಿಸ್ಥಿತಿ ನಿಯಂತ್ರಿಸಲು ತುರ್ತು ಕ್ರಮಗಳನ್ನು ಕೈಗೊಳ್ಳುವಂತೆ ಐಜಿಪಿಗೆ ಸಿಎಂ ಸೂಚಿಸಿದ್ದು, ಜನರು ಶಾಂತವಾಗಿ ಮತ್ತು ಶಾಂತಿಯಿಂದ ಇರುವಂತೆ ಮನವಿ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...