alex Certify ಚಿಕ್ಕಮಗಳೂರಿನಲ್ಲಿ ಪ್ಯಾಲೇಸ್ತೀನ್ ಧ್ವಜ ಹಿಡಿದು ಸಂಚಾರ: ಕ್ರಮಕ್ಕೆ ಒತ್ತಾಯಿಸಿ ಹಿಂದೂ ಸಂಘಟನೆಗಳ ಪ್ರತಿಭಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚಿಕ್ಕಮಗಳೂರಿನಲ್ಲಿ ಪ್ಯಾಲೇಸ್ತೀನ್ ಧ್ವಜ ಹಿಡಿದು ಸಂಚಾರ: ಕ್ರಮಕ್ಕೆ ಒತ್ತಾಯಿಸಿ ಹಿಂದೂ ಸಂಘಟನೆಗಳ ಪ್ರತಿಭಟನೆ

ಚಿಕ್ಕಮಗಳೂರು: ಯುವಕರಿಬ್ಬರು ಭಾನುವಾರ ಪ್ಯಾಲೇಸ್ತೀನ್ ಧ್ವಜ ಹಿಡಿದು ಚಿಕ್ಕಮಗಳೂರು ನಗರದಾದ್ಯಂತ ಸಂಚಾರ ನಡೆಸಿದ ಘಟನೆ ನಡೆದಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಸೋಮವಾರ ಈದ್ ಮಿಲಾದ್ ಮೆರವಣಿಗೆಗೆ ಸಿದ್ಧತೆ ನಡೆಯುವ ಸಂದರ್ಭದಲ್ಲಿ ಮುಸ್ಲಿಂ ಯುವಕರು ಧ್ವಜ ಹಿಡಿದು ಬೈಕ್ ನಲ್ಲಿ ನಗರದ ವಿವಿಧೆಡೆ ಓಡಾಡಿದ್ದಾರೆ. ಚಿಕ್ಕಮಗಳೂರಿನ ಕೆಎಂ ರಸ್ತೆ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಧ್ವಜ ಹಿಡಿದು ಬೈಕ್ ನಲ್ಲಿ ಓಡಾಡಿದ್ದು, ಇದನ್ನು ಗಮನಿಸಿದ ಸಾರ್ವಜನಿಕರೊಬ್ಬರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ.

ನಗರ ಪೊಲೀಸ್ ಠಾಣೆ ಎದುರು ಜಮಾಯಿಸಿದ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಪ್ಯಾಲೇಸ್ತೀನ್ ಧ್ವಜ ಹಿಡಿದು ಓಡಾಡುವ ಮೂಲಕ ದೇಶ ದ್ರೋಹದ ಕೆಲಸ ಮಾಡಿರುವ ಯುವಕರನ್ನು ಕೂಡಲೇ ಬಂಧಿಸಬೇಕು. ಅವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...