ಪೋಷಕರೇ ಗಮನಿಸಿ : ವಸತಿ ಶಾಲೆಗಳಲ್ಲಿ 2024-25 ನೇ ಶೈಕ್ಷಣಿಕ ಸಾಲಿನ 6 ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ಬೆಂಗಳೂರು :  2024-25 ಸಾಲಿಗೆ ಸಂಬಂಧಿಸಿದಂತೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ/ ಕಿತ್ತೂರು ರಾಣಿ ಚೆನ್ನಮ್ಮ / ಏಕಲವ್ಯ ಮಾದರಿ / ಆಟಲ್ ಬಿಹಾರಿ ವಾಜಪೇಯಿ /ಇಂದಿರಾ ಗಾಂಧಿ / ಡಾ|| ಬಿ.ಆರ್. ಅಂಬೇಡ್ಕರ್ / ಮಾಸ್ತಿ ವೆಂಕಟೇಶ ಅಯ್ಯಂಗಾರ್ / ಸಂಗೊಳ್ಳಿ ರಾಯಣ್ಣ / ಕವಿರನ್ನ / ಗಾಂಧಿತತ್ವ / ಶ್ರೀ ನಾರಾಯಣ ಗುರು ಮುಂತಾದ ವಸತಿ ಶಾಲೆಗಳಿಗೆ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಅಭ್ಯರ್ಥಿಗಳ ಪೋಷಕರು ತಮ್ಮ ಮಕ್ಕಳನ್ನು 6ನೇ ತರಗತಿಗೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳಲ್ಲಿನ ವಸತಿ ಶಾಲೆಗಳಿಗೆ ಪ್ರವೇಶ ಪಡೆಯಲು, ದಿನಾಂಕ: 07-12-2023 ರ ಬೆಳಿಗ್ಗೆ 11.00 ರಿಂದ 31-12-2023 ರಾತ್ರಿ 11.59ರ ವರೆಗೆ ರವರೆಗೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆ / ಕಾಲೇಜುಗಳ ಮೂಲಕ ಆನ್‌ಲೈನ್ ನಲ್ಲಿ ಅರ್ಜಿ ಸಲ್ಲಿಸಲು ತಿಳಿಸಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ದಿನಾಂಕ: 18-02-2024 ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರವೇಶ ಪರೀಕ್ಷೆ ನಡೆಸಲಿದೆ.

ಅರ್ಜಿ ಸಲ್ಲಿಸಲು ವರ್ಗಾವಾರು ವಾರ್ಷಿಕ ಆದಾಯದ ಮಿತಿ ಕೆಳಕಂಡಂತಿದೆ.

ವಿದ್ಯಾರ್ಥಿಯ ವರ್ಗ

ಪ.ಜಾತಿ / ಪರಿಶಿಷ್ಟ ವರ್ಗ : 2,50,000/-

ಹಿಂ.ವರ್ಗದ ಪ್ರವರ್ಗ-1 : 2,50,000/-

ಹಿಂ.ವರ್ಗ 2ಎ, 2ಬಿ, 3ಎ ಮತ್ತು 3ಬಿ : 1,00,000/-

ಅರ್ಜಿ ಸಲ್ಲಿಸುವ ವಿಧಾನ, ಹಾಗೂ “ಮಾಹಿತಿ ಪುಸ್ತಕ http://kea.kar.nic.in ag #鳥 & gre on 2024” ವನ್ನು ಪ್ರಾಧಿಕಾರದ ವೆಬ್‌ಸೈಟ್: : http://kreis.kar.nic.in ಪ್ರಚುರ ಪಡಿಸಲಾಗಿದೆ. ಪರೀಕ್ಷೆಗೆ ಪ್ರವೇಶ ಪತ್ರಗಳನ್ನು ದಿನಾಂಕ: 01-02-2024 ರಿಂದ ಈ ಮೇಲ್ಕಂಡ ವೆಬ್‌ಸೈಟ್‌ಗಳಿಂದ ಆಯಾ ವಸತಿ ಶಾಲೆಯಲ್ಲಿ ಡೌನ್ ಲೋಡ್ ಮಾಡಿಕೊಳ್ಳಬಹುದು.

ಗಮನಿಸಿ: ಅಭ್ಯರ್ಥಿಯು ಈಗಾಗಲೇ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಶಾಲೆಯಿಂದ SATS ಸಂಖ್ಯೆ. ಇತ್ತೀಚಿನ ಭಾವಚಿತ್ರ ಮತ್ತು ಮೀಸಲಾತಿಗೆ ಸಂಬಂಧಿಸಿದ ಎಲ್ಲಾ ಮೂಲ ದಾಖಲಾತಿಗಳನ್ನು ಅಥವಾ ಜೆರಾಕ್ಸ್ ಪ್ರತಿಗಳನ್ನು ತೆಗೆದುಕೊಂಡು ಅರ್ಜಿ ಸಲ್ಲಿಸುವ ಸಮಯದಲ್ಲಿ ಸಂಬಂಧಿಸಿದ ವಸತಿ ಶಾಲೆ / ಕಾಲೇಜಿನ ಮುಖ್ಯಸ್ಥರನ್ನು ಸಂಪರ್ಕಿಸಬೇಕು.

ಪ್ರವೇಶ ಪರೀಕ್ಷೆ – 2024 ರ ವೇಳಾಪಟ್ಟಿ

18-02-2024 ಭಾನುವಾರ

ಬೆಳಿಗ್ಗೆ 11.00 ರಿಂದ ಮಧ್ಯಾಹ್ನ 1.00 ರವರೆಗೆ

ಅಂಕಗಳು : 100

ವಸತಿ ಶಾಲೆಗಳ ಆಯ್ಕೆಯ ಆದ್ಯತಾ ಕ್ರಮದಲ್ಲಿ ನಮೂದಿಸುವ ಕುರಿತು: ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವಾಗ ಯಾವ  ಶಾಲೆಗಳಲ್ಲಿ ದಾಖಲಾತಿ ಬಯಸುತ್ತಾರೋ, ಅಂತಹ ಶಾಲೆಗಳನ್ನು ಆದ್ಯತಾ ಕ್ರಮದಲ್ಲಿ ಆಯ್ಕೆ ಮಾಡಿಕೊಳ್ಳಬೇಕು.

ಆದ್ಯತಾ ಕ್ರಮದಲ್ಲಿ ದಾಖಲಿಸುವ ಶಾಲೆಗಳನ್ನು ಮಾತ್ರ ಹಂಚಿಕೆಗೆ ಪರಿಗಣಿಸಲಾಗುವುದು. ಅಭ್ಯರ್ಥಿಗಳು ತಮ್ಮ ಸೀಟು ಹಂಚಿಕೆ ಅವಕಾಶವನ್ನು ಹೆಚ್ಚಿಸಿಕೊಳ್ಳಲು ತಮ್ಮ ಜಿಲ್ಲೆಯಲ್ಲಿರುವ KREIS ನ ಎಲ್ಲಾ ವಸತಿ ಶಾಲೆಗಳನ್ನು ಆದ್ಯತಾ ಕ್ರಮದಲ್ಲಿ ನಮೂದಿಸತಕ್ಕದು. ಪ್ರವೇಶ ಪರೀಕ್ಷೆಯಲ್ಲಿ ಗಳಿಸಿದ ಮೆರಿಟ್, ಮೀಸಲಾತಿ ಹಾಗೂ ಅಭ್ಯರ್ಥಿಗಳು ಪ್ರವೇಶಾತಿಗಾಗಿ ನಮೂದಿಸಿರುವ ಶಾಲೆಗಳ ಆದ್ಯತಾ ಕ್ರಮದ ಆಧಾರದ ಮೇಲೆ Computerized Auto Selection ಮೂಲಕ ಸೀಟು ಹಂಚಿಕೆಯನ್ನು ಮಾಡಲಾಗುವುದು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read