alex Certify BIG NEWS: ಶಿವಮೊಗ್ಗದಲ್ಲಿ ಸ್ಪೋಟ, ಭದ್ರಾ ಜಲಾಶಯಕ್ಕೆ ತಡರಾತ್ರಿ ಕಾಡಾ ಅಧ್ಯಕ್ಷರ ಭೇಟಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಶಿವಮೊಗ್ಗದಲ್ಲಿ ಸ್ಪೋಟ, ಭದ್ರಾ ಜಲಾಶಯಕ್ಕೆ ತಡರಾತ್ರಿ ಕಾಡಾ ಅಧ್ಯಕ್ಷರ ಭೇಟಿ

ಶಿವಮೊಗ್ಗ: ಗುರುವಾರ ರಾತ್ರಿ ಸುಮಾರು 10.20 ರ ಸಮಯದಲ್ಲಿ ಶಿವಮೊಗ್ಗ ಜಿಲ್ಲೆಯಾದ್ಯಂತ ಉಂಟಾದ ಭಾರಿ ಕಂಪನದ ಹಿನ್ನಲೆಯಲ್ಲಿ ತಕ್ಷಣವೇ ಕಾರ್ಯ ಪ್ರವೃತ್ತರಾದ ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷೆ ಪವಿತ್ರಾ ರಾಮಯ್ಯ ಅವರು  ಅಧಿಕಾರಿಗಳೊಂದಿಗೆ ತೆರಳಿ ಭದ್ರಾ ಜಲಾಶಯ ವೀಕ್ಷಣೆ ಮಾಡಿ ಜಲಾಶಯದ ಸ್ಥಿತಿಗತಿಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಂಡಿದ್ದಾರೆ.

ಭದ್ರಾ ಕಾಡಾ ಪ್ರಾಧಿಕಾರ ಸುಮಾರು 12 ಜಿಲ್ಲೆಗಳ ವ್ಯಾಪ್ತಿಯನ್ನು ಹೊಂದಿದ್ದು, ಭದ್ರಾ ಜಲಾಶಯವು ಸುಮಾರು 5 ಲಕ್ಷ ಹೆಕ್ಟೇರ್ ಭೂ ಪ್ರದೇಶಕ್ಕೆ ನೀರು ಒದಗಿಸುವ ಯಾಜನೆಯಾಗಿದೆ. ಲಕ್ಷಾಂತರ ರೈತರಿಗೆ ಭದ್ರಾ ಜಲಾಶಯವು ಜೀವನಾಡಿಯಾಗಿದ್ದು ಅಚ್ಚುಕಟ್ಟು ಭಾಗದ ರೈತರು ಇದನ್ನೇ ನಂಬಿ ಬದುಕುತ್ತಿದ್ದಾರೆ.

ಕಂಪನದಿಂದ ಯಾವುದೇ ರೀತಿಯಲ್ಲಿ ಜಲಾಶಯಕ್ಕೆ ತೊಂದರೆಯಾಗುವುದಿಲ್ಲ ರೈತರು ಆತಂಕ ಪಡುವ ಅಗತ್ಯವಿಲ್ಲ ಎಂದು ಅವರು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...