alex Certify ಪೆಗಾಸಸ್​ ಮೂಲಕ ಸಂವಿಧಾನವನ್ನು ಹತ್ತಿಕ್ಕಲು ಯತ್ನಿಸಲಾಗಿತ್ತು; ಮೋದಿ ಸರ್ಕಾರದ ವಿರುದ್ಧ ರಾಹುಲ್ ವಾಗ್ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪೆಗಾಸಸ್​ ಮೂಲಕ ಸಂವಿಧಾನವನ್ನು ಹತ್ತಿಕ್ಕಲು ಯತ್ನಿಸಲಾಗಿತ್ತು; ಮೋದಿ ಸರ್ಕಾರದ ವಿರುದ್ಧ ರಾಹುಲ್ ವಾಗ್ದಾಳಿ

ಇಸ್ರೆಲ್​ ಕಂಪನಿಯ ಗೂಢಚರ್ಯ ತಂತ್ರಾಶದ ಮೂಲಕ ಕೇಂದ್ರ ಸರ್ಕಾರವು ಪತ್ರಕರ್ತರು ಸೇರಿದಂತೆ 300ಕ್ಕೂ ಅಧಿಕ ಮಂದಿಯ ಫೋನ್​ ಕದ್ದಾಲಿಕೆ ಮಾಡಿದೆ ಎಂಬ ಪ್ರಕರಣದಡಿಯಲ್ಲಿ ಇಂದು ಮಧ್ಯಂತರ ಆದೇಶ ಪ್ರಕಟಿಸಿದ ಸುಪ್ರೀಂ ಕೋರ್ಟ್​ ಮೂವರು ಸದಸ್ಯರನ್ನೊಳಗೊಂಡ ಸಮಿತಿಯನ್ನು ರಚಿಸಿದೆ.

ಇದೇ ವಿಚಾರವಾಗಿ ಮಾತನಾಡಿದ ಕಾಂಗ್ರೆಸ್​ ನಾಯಕ ಹಾಗೂ ಸಂಸದ ರಾಹುಲ್​ ಗಾಂಧಿ ಪೆಗಾಸಸ್​ ಭಾರತದ ಸಂವಿಧಾನವನ್ನು ಹತ್ತಿಕ್ಕುವ ಪ್ರಯತ್ನವಾಗಿದೆ ಎಂದು ಕಿಡಿಕಾರಿದ್ದಾರೆ.

ಸುಪ್ರೀಂ ಕೋರ್ಟ್​ ಈ ವಿಚಾರವಾಗಿ ತನಿಖೆಗೆ ಸಮಿತಿ ರಚಿಸುವ ಮೂಲಕ ಮಹತ್ವದ ಹೆಜ್ಜೆಯನ್ನೇ ಇಟ್ಟಿದೆ. ಸತ್ಯ ಶೀಘ್ರದಲ್ಲೇ ಹೊರಬರಲಿದೆ ಎಂಬ ನಂಬಿಕೆ ನನಗಿದೆ. ಪಾರ್ಲಿಮೆಂಟ್​ ಸೆಷನ್​ ವೇಳೆ ನಾವು ಪೆಗಾಸಸ್​ ವಿಚಾರದ ಬಗ್ಗೆ ಧ್ವನಿಯೆತ್ತಿದ್ದೆವು. ಆದರೆ ಈಗ ಸುಪ್ರೀಂಕೋರ್ಟ್​ ಕಾಂಗ್ರೆಸ್​ ಇಷ್ಟು ದಿನ ಏನು ವಾದ ಮಾಡಿತ್ತೋ ಅದೇ ರೀತಿಯ ಅಭಿಪ್ರಾಯವನ್ನು ವ್ಯಕ್ತಪಡಿಸಿದೆ ಎಂದು ಹೇಳಿದ್ದಾರೆ.

ಪೆಗಾಸಸ್​ ಖರೀದಿ ಮಾಡಿದ್ದು ಯಾರು..? ಯಾರ್ಯಾರ ಮೇಲೆ ಪೆಗಾಸಸ್​ ಬಳಕೆ ಮಾಡಲಾಗಿದೆ..? ಪೆಗಾಸಸ್​ ಮೂಲಕ ಸಂಗ್ರಹಿಸಲಾದ ಮಾಹಿತಿಯು ಇನ್ಯಾವ ದೇಶದ ಬಳಿ ಏನಾದರೂ ಇದೆಯೇ..? ಎಂದು ಕೇಂದ್ರ ಸರ್ಕಾರಕ್ಕೆ ರಾಹುಲ್​ ಗಾಂಧಿ ಪ್ರಶ್ನೆ ಮಾಡಿದ್ದಾರೆ.

ಪೆಗಾಸಸ್​​ ವಿಚಾರವಾಗಿ ಇಂದು ಮಧ್ಯಂತರ ಆದೇಶ ಹೊರಡಿಸಿರುವ ಸುಪ್ರೀಂಕೋರ್ಟ್, ಕೇವಲ ಸೆಲೆಬ್ರಿಟಿಗಳು ಮಾತ್ರವಲ್ಲದೇ ಸಾಮಾನ್ಯ ಜನತೆಗೂ ತಮ್ಮ ಗೌಪ್ಯತೆ ಕಾಪಾಡಿಕೊಳ್ಳುವ ಹಕ್ಕಿದೆ ಎಂದು ಹೇಳುವ ಮೂಲಕ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತ್ತು.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...