alex Certify ಪಿಂಚಣಿದಾರರಿಗೆ ಮತ್ತೊಂದು ಸಿಹಿ ಸುದ್ದಿ: ಇಲ್ಲಿದೆ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಿಂಚಣಿದಾರರಿಗೆ ಮತ್ತೊಂದು ಸಿಹಿ ಸುದ್ದಿ: ಇಲ್ಲಿದೆ ಮಾಹಿತಿ

ಧಾರವಾಡ: ನಗರದ ಖಜಾನೆ ಇಲಾಖೆಯ ಉಪನಿರ್ದೇಶಕರ ಕಚೇರಿಯಲ್ಲಿ ಡಿಸೆಂಬರ್ 28 ರ ಇಂದು ಪಿಂಚಣಿ ಆದಾಲತ್ ಆಯೋಜಿಸಲಾಗಿದೆ.

ಭಾರತೀಯ ಸ್ಟೇಟ್ ಬ್ಯಾಂಕ್, ಕೆನರಾ ಬ್ಯಾಂಕ್, ಯೂನಿಯನ್ ಬ್ಯಾಂಕ್ ಹಾಗೂ ಬ್ಯಾಂಕ್ ಆಫ್ ಬರೋಡಾ ಶಾಖೆಗಳನ್ನು ಹೊರತುಪಡಿಸಿ ಇನ್ನುಳಿದ ಬ್ಯಾಂಕ್‍ಗಳಲ್ಲಿ ಪಿಂಚಣಿ ಪಡೆಯುತ್ತಿರುವ ಪಿಂಚಣಿದಾರರು ಈ ಅದಾಲತ್‍ನಲ್ಲಿ ಭಾಗವಹಿಸಬಹುದು.

ಬ್ಯಾಂಕ್ ಬದಲಾವಣೆ ಅಭಿಮತ ನೀಡುವ, ನೀಡದಿರುವ, ಜೀವಿತ ಪ್ರಮಾಣ ಪತ್ರ ಒದಗಿಸುವ, ಕಾಲಾವಧಿ ವಿಸ್ತರಣೆ, ಪಿಂಚಣಿ ಸಂದಾಯ ಆದೇಶಗಳನ್ನು ಕಳೆದುಕೊಂಡಿರುವ ಪ್ರಕರಣಗಳು ಸೇರಿದಂತೆ ಪಿಂಚಣಿಗೆ ಸಂಬಂಧಿಸಿದ ಇನ್ನಿತರ ವಿಷಯಗಳ ಕುರಿತು ಚರ್ಚಿಸಲು ಅಂದು ಬೆಳಿಗ್ಗೆ 11 ಗಂಟೆಗೆ ಉಪನಿರ್ದೇಶಕರ ಕಚೇರಿ, ಜಿಲ್ಲಾ ಖಜಾನೆ, ಡಿ.ಸಿ. ಕಂಪೌಂಡ್, ಧಾರವಾಡ ಇಲ್ಲಿ ಹಾಜರಿರಲು ಕೋರಿದೆ.

ಪಿಂಚಣಿದಾರರು ಯಾವುದೇ ದೈಹಿಕ ಖಾಯಿಲೆಗಳು, ಕೋವಿಡ್ ಸಾಂಕ್ರಾಮಿಕ ಹಿನ್ನೆಲೆಯಲ್ಲಿ ಸಭೆಗೆ ಹಾಜರಾಗಲು ಸಮಸ್ಯೆಗಳಿದ್ದರೆ ಕುಟುಂಬದ ಸದಸ್ಯರು ಸೂಕ್ತ ದಾಖಲೆಗಳೊಂದಿಗೆ ಹಾಜರಾಗಬಹುದು. ಹೆಚ್ಚಿನ ಮಾಹಿತಿಗೆ 0836-2448251 ದೂರವಾಣಿ ಸಂಪರ್ಕಿಸಬಹುದು ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...