alex Certify ಪೆಟ್ರೋಲ್ ಬಂಕ್ ಆವರಣದಲ್ಲೇ ಕಾರ್ ಗೆ ಬೆಂಕಿ: ಅದೃಷ್ಟವಶಾತ್ ತಪ್ಪಿದ ಭಾರಿ ದುರಂತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪೆಟ್ರೋಲ್ ಬಂಕ್ ಆವರಣದಲ್ಲೇ ಕಾರ್ ಗೆ ಬೆಂಕಿ: ಅದೃಷ್ಟವಶಾತ್ ತಪ್ಪಿದ ಭಾರಿ ದುರಂತ

ಬೆಳಗಾವಿ: ಪೆಟ್ರೋಲ್ ಬಂಕ್ ಆವರಣದಲ್ಲಿಯೇ ಕಾರ್ ಗೆ ಬೆಂಕಿ ತಗುಲಿದ್ದು, ಅದೃಷ್ಟವಶಾತ್ ಪೆಟ್ರೋಲ್ ಬಂಕ್ ಸಿಬ್ಬಂದಿ ಸಮಯ ಪ್ರಜ್ಞೆಯಿಂದಾಗಿ ಸಂಭವಿಸಬಹುದಾಗಿದ್ದ ಭಾರಿ ಅನಾಹುತ ತಪ್ಪಿದೆ.

ಬೆಳಗಾವಿಯ ಕೊಲ್ಲಾಪುರ ವೃತ್ತದ ಬಳಿ ಪೆಟ್ರೋಲ್ ಬಂಕ್ ನಲ್ಲಿ ಘಟನೆ ನಡೆದಿದೆ. ಯಾವುದೇ ಪ್ರಾಣಾಪಾಯವಾಗಿಲ್ಲ. ಹೊಸಮನಿ ಅಂಡ್ ಸನ್ಸ್ ಅವರಿಗೆ ಸೇರಿದ ಪೆಟ್ರೋಲ್ ಬಂಕ್ ನಲ್ಲಿ ಇಂಧನ ತುಂಬಿಸಿಕೊಳ್ಳಲು ಮಾರುತಿ ಸ್ವಿಫ್ಟ್ ಕಾರ್ ಬಂದಿದ್ದು, ಈ ವೇಳೆ ಏಕಾಏಕಿ ಕಾರ್ ನಲ್ಲಿ ಬೆಂಕಿ ಕಾಣಿಸಿದೆ. ಬಂಕ್ ಸಿಬ್ಬಂದಿ ಕೂಡಲೇ ಸ್ಥಳದಲ್ಲಿದ್ದ ಅಗ್ನಿ ನಂದಕಗಳಿಂದ ಬೆಂಕಿಯನ್ನು ನಂದಿಸಿದ್ದಾರೆ.

ಕಾರ್ ನಲ್ಲಿದ್ದ ಇಬ್ಬರು ಮಕ್ಕಳು, ಚಾಲಕ ಮತ್ತು ಮಹಿಳೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪೆಟ್ರೋಲ್ ಬಂಕ್ ಸಿಬ್ಬಂದಿ ತೋರಿದ ಸಮಯ ಪ್ರಜ್ಞೆಯಿಂದಾಗಿ ಭಾರಿ ಅನಾಹುತವೊಂದು ತಪ್ಪಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...