alex Certify ಕುವೈತ್ ನಲ್ಲಿ ಸಂಕಷ್ಟದಲ್ಲಿರುವ ಭಾರತೀಯರ ನೆರವಿಗೆ ಮೋದಿ ಸರ್ಕಾರದ ಕ್ರಮ: ತುರ್ತು ಭೇಟಿಗೆ ಪ್ರಧಾನಿ ನಿರ್ದೇಶನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕುವೈತ್ ನಲ್ಲಿ ಸಂಕಷ್ಟದಲ್ಲಿರುವ ಭಾರತೀಯರ ನೆರವಿಗೆ ಮೋದಿ ಸರ್ಕಾರದ ಕ್ರಮ: ತುರ್ತು ಭೇಟಿಗೆ ಪ್ರಧಾನಿ ನಿರ್ದೇಶನ

ನವದೆಹಲಿ: ಅಗ್ನಿ ದುರಂತದಲ್ಲಿ ಗಾಯಗೊಂಡವರಿಗೆ ನೆರವು ನೀಡುವ ಸಲುವಾಗಿ ತುರ್ತಾಗಿ ಕುವೈತ್‌ ಗೆ ತೆರಳುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು MoS MEA ಕೀರ್ತಿ ವರ್ಧನ್ ಸಿಂಗ್ ಅವರಿಗೆ ಸೂಚಿಸಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.

ಸ್ಥಳೀಯ ಮಾಧ್ಯಮಗಳ ವರದಿಗಳ ಪ್ರಕಾರ, ಬುಧವಾರ ಬೆಂಕಿ ಅವಘಡದಲ್ಲಿ ಕನಿಷ್ಠ 49 ಜನರು ಸಾವನ್ನಪ್ಪಿದ್ದಾರೆ. ಎಂಇಎ ವಕ್ತಾರ ರಣಧೀರ್ ಜೈಸ್ವಾಲ್ ತಿಳಿಸಿದ್ದಾರೆ. ಈ ದುರದೃಷ್ಟಕರ ಘಟನೆಯಲ್ಲಿ ಸಾವನ್ನಪ್ಪಿದವರ ಮೃತದೇಹಗಳನ್ನು ಶೀಘ್ರವಾಗಿ ಸ್ವದೇಶಕ್ಕೆ ತರಲು ಸಿಂಗ್ ಸ್ಥಳೀಯ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಲಿದ್ದಾರೆ ಎಂದು ಹೇಳಿದ್ದಾರೆ.

ಪ್ರಧಾನಿ ಮೋದಿ ಅವರ ನಿರ್ದೇಶನದಂತೆ ಅಗ್ನಿ ದುರಂತದಲ್ಲಿ ಗಾಯಗೊಂಡವರಿಗೆ ಸಹಾಯ ಮಾಡಲು ಮತ್ತು ಈ ದುರದೃಷ್ಟಕರ ಘಟನೆಯಲ್ಲಿ ಸಾವನ್ನಪ್ಪಿದವರ ಮೃತದೇಹಗಳನ್ನು ಶೀಘ್ರವಾಗಿ ಸ್ವದೇಶಕ್ಕೆ ಹಿಂದಿರುಗಿಸಲು ಸ್ಥಳೀಯ ಅಧಿಕಾರಿಗಳೊಂದಿಗೆ ಸಮನ್ವಯಗೊಳಿಸಲು ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವರು ತುರ್ತಾಗಿ ಕುವೈತ್‌ಗೆ ಪ್ರಯಾಣಿಸುತ್ತಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.

ಈ ದುರಂತ ಘಟನೆಯಲ್ಲಿ ಕನಿಷ್ಠ 40 ಭಾರತೀಯ ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ಬಹು ಮಾಧ್ಯಮ ವರದಿಗಳು ಹೇಳಿವೆ. ಅಗ್ನಿ ದುರಂತದಲ್ಲಿ ಸಾವನ್ನಪ್ಪಿದವರ ನಿಖರ ಸಂಖ್ಯೆಯನ್ನು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಬಹಿರಂಗಪಡಿಸದಿದ್ದರೂ, ಬಿಡುಗಡೆಯಾದ ಇತ್ತೀಚಿನ ಹೇಳಿಕೆಯಲ್ಲಿ ಮೃತರ ಅವಶೇಷಗಳನ್ನು ಉಲ್ಲೇಖಿಸಿದೆ. ಅದರ ಹಿಂದಿನ ಹೇಳಿಕೆಗಳಲ್ಲಿ, MEA ಗಾಯಗಳ ಬಗ್ಗೆ ಮಾತ್ರ ಉಲ್ಲೇಖಿಸಿದೆ. ಕುವೈತ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯೂ ಇದನ್ನೇ ಹೇಳಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...