alex Certify 12 ವರ್ಷಗಳ ಬಳಿಕ ರಾಜ್ಯದಲ್ಲಿ ರಾಷ್ಟ್ರೀಯ ಯುವಜನೋತ್ಸವ: ಇಂದು ಮೋದಿ ಚಾಲನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

12 ವರ್ಷಗಳ ಬಳಿಕ ರಾಜ್ಯದಲ್ಲಿ ರಾಷ್ಟ್ರೀಯ ಯುವಜನೋತ್ಸವ: ಇಂದು ಮೋದಿ ಚಾಲನೆ

ಹುಬ್ಬಳ್ಳಿ: 12 ವರ್ಷದ ನಂತರ ರಾಜ್ಯದಲ್ಲಿ ರಾಷ್ಟ್ರೀಯ ಯುವ ಜನೋತ್ಸವ ಆಯೋಜಿಸಲಾಗಿದೆ. ಹುಬ್ಬಳ್ಳಿಯಲ್ಲಿ ನಡೆಯುವ ಸಮಾರಂಭದಲ್ಲಿ ಇಂದು ಪ್ರಧಾನಿ ಮೋದಿ ರಾಷ್ಟ್ರೀಯ ಯುವಜನೋತ್ಸವಕ್ಕೆ ಚಾಲನೆ ನೀಡಲಿದ್ದಾರೆ.

ಸ್ವಾಮಿ ವಿವೇಕಾನಂದರ ಜನ್ಮದಿನವಾದ ಇಂದು ಕಳೆದ 25 ವರ್ಷಗಳಿಂದ ಕೇಂದ್ರ ಯುವ ಜನಸೇವೆ, ಕ್ರೀಡಾ ಸಚಿವಾಲಯ ಯುವಜನೋತ್ಸವ ಆಯೋಜಿಸುತ್ತಿದೆ. ಈ ಬಾರಿ ಧಾರವಾಡದಲ್ಲಿ 26ನೇ ರಾಷ್ಟ್ರೀಯ ಯುವಜನೋತ್ಸವ ಆಯೋಜಿಸಲಾಗಿದೆ.

2012ರಲ್ಲಿ ಒಂದು ದಿನದ ಯುವಜನೋತ್ಸವ ಮಂಗಳೂರಿನಲ್ಲಿ ನಡೆದಿತ್ತು. ಹುಬ್ಬಳ್ಳಿಯಲ್ಲಿ ಉದ್ಘಾಟನೆ ಸಮಾರಂಭ ನಡೆಯಲಿದ್ದು, ಐದು ದಿನದ ಕಾರ್ಯಕ್ರಮಗಳು ಧಾರವಾಡದಲ್ಲಿ ಜರುಗಲಿವೆ. 7500 ಪ್ರತಿನಿಧಿಗಳು, 40,000ಕ್ಕೂ ಅಧಿಕ ಯುವ ಜನರು ಭಾಗವಹಿಸಲಿದ್ದಾರೆ. ಪ್ರಧಾನಿ ಮೋದಿ ಉದ್ಘಾಟನಾ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ. ಈ ಹಿನ್ನೆಲೆಯಲ್ಲಿ ಹುಬ್ಬಳ್ಳಿ, ಧಾರವಾಡದಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...