alex Certify BREAKING NEWS: ರಾಜ್ಯಕ್ಕೆ ಆಗಮಿಸಿದ ಪ್ರಧಾನಿ ಮೋದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ರಾಜ್ಯಕ್ಕೆ ಆಗಮಿಸಿದ ಪ್ರಧಾನಿ ಮೋದಿ

ಬೆಂಗಳೂರು: ಲೋಕಸಭಾ ಚುನಾವಣಾ ಅಖಾಡ ರಂಗೇರಿದೆ. ರಾಜ್ಯದಲ್ಲಿ ಮತದಾನಕ್ಕೆ ಕೆಲ ದಿನಗಳು ಮಾತ್ರ ಬಾಕಿ ಇದೆ. ರಾಜಕೀಯ ಪಕ್ಷಗಳ ನಾಯಕರು ಮತದಾರನ್ನು ಓಲೈಸಲು ಕೊನೇ ಹಂತದ ಕಸರತ್ತು ನಡೆಸಿದ್ದು, ಅಬ್ಬರ ಪ್ರಚಾರ ನಡೆಸುತ್ತಿದ್ದಾರೆ. ಬಿಜೆಪಿ ಅಭ್ಯರ್ಥಿಗಳ ಪರ ಮತ ಬೇಟೆಗಾಗಿ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಆಗಮಿಸಿದ್ದಾರೆ.

ದೆಹಲಿಯಿಂದ ವಿಷೇಷ ವಿಮಾನದಲ್ಲಿ ಬೆಂಗಳೂರಿನ ಕೆಂಪೇಗೌಡ ಏರ್ ಪೋರ್ಟ್ ಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ, ಹೆಲಿಕಾಪ್ಟರ್ ಮೂಲಕ ಚಿಕ್ಕಬಳ್ಳಾಪುರಕ್ಕೆ ತೆರಳಿದ್ದಾರೆ. ಚಿಕ್ಕಬಳ್ಳಾಪುರದ ಅಗಲಗುರ್ಕಿಯಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಪರ ಚುನಾವಣಾ ಪ್ರಚಾರ ನಡೆಸಲಿದ್ದಾರೆ.

ಬಳಿಕ ಬೆಂಗಳೂರಿಗೆ ವಾಪಾಸ್ ಆಗಲಿದ್ದು, ಅರಮನೆ ಮೈದಾನದಲ್ಲಿ ನಡೆಯಲಿರುವ ಬೃಹತ್ ಸಮಾವೇಶದಲ್ಲಿ ಭಾಗಿಯಾಗಿ, ಬಿಜೆಪಿ ಬ್ಯರ್ಥಿಗಳ ಪರ ಮತಯಾಚಿಸಲಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...