alex Certify ಮುಖ್ಯಮಂತ್ರಿಗಳ ಜೊತೆ ಪಿಎಂ ಸಭೆ: ಕೊರೊನಾ ನಿಯಂತ್ರಣದ ಬಗ್ಗೆ ಕಿವಿಮಾತು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮುಖ್ಯಮಂತ್ರಿಗಳ ಜೊತೆ ಪಿಎಂ ಸಭೆ: ಕೊರೊನಾ ನಿಯಂತ್ರಣದ ಬಗ್ಗೆ ಕಿವಿಮಾತು

ದೇಶದಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಿದ್ದಾರೆ. ಮುಖ್ಯಮಂತ್ರಿಗಳೊಂದಿಗೆ ಕೊರೊನಾದ ಪರಿಣಾಮ ಮತ್ತು ವ್ಯಾಕ್ಸಿನೇಷನ್ ಬಗ್ಗೆ ಪಿಎಂ ಮೋದಿ ಚರ್ಚೆ ನಡೆಸಿದ್ದಾರೆ. ಕೋವಿಡ್ 19 ವಿರುದ್ಧ ಭಾರತದ ಹೋರಾಟದ ಉದಾಹರಣೆಯನ್ನು ಜಗತ್ತಿನಲ್ಲಿ ನೀಡಲಾಗಿದೆ. ಚೇತರಿಕೆ ಪ್ರಮಾಣವು ಶೇಕಡಾ 96 ಕ್ಕಿಂತ ಹೆಚ್ಚಾಗಿದ್ದು, ನಿಧನದ ಸಂಖ್ಯೆ ಅತ್ಯಂತ ಕಡಿಮೆ ಎಂದು ಅವರು ಹೇಳಿದ್ದಾರೆ.

ಮುಖ್ಯಮಂತ್ರಿಗಳೊಂದಿಗಿನ ಸಂವಾದದಲ್ಲಿ ಪಿಎಂ ಮೋದಿ,‌ ಕೊರೊನಾ ವೈರಸ್ ಮತ್ತೆ ಹರಡುವುದನ್ನು ತಕ್ಷಣ ನಿಲ್ಲಿಸಬೇಕೆಂದಿದ್ದಾರೆ. ಇದಕ್ಕಾಗಿ ರಾಜ್ಯ ಸರ್ಕಾರ ಸಣ್ಣ ನಗರಗಳಲ್ಲಿ ಪರೀಕ್ಷೆಯ ಪ್ರಮಾಣವನ್ನು ಹೆಚ್ಚಿಸಬೇಕು ಎಂದು ಸೂಚನೆ ನೀಡಿದ್ದಾರೆ. ಈ ಸಭೆಯಲ್ಲಿ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ಛತ್ತೀಸ್ ಗಢದ  ಸಿಎಂ ಭೂಪೇಶ್ ಬಾಗೇಲ್ ಮತ್ತು ಯುಪಿ ಸಿಎಂ ಯೋಗಿ ಆದಿತ್ಯನಾಥ್ ಭಾಗವಹಿಸಲಿಲ್ಲ.

ಸಭೆಯಲ್ಲಿ ಮೋದಿ ಕೊರೊನಾ ನಿಯಂತ್ರಣಕ್ಕೆ ಸಾಕಷ್ಟು ಸಲಹೆ ನೀಡಿದ್ದಾರೆ. ಲಸಿಕೆಗಳನ್ನು ವ್ಯರ್ಥ ಮಾಡುವ ವಿಷಯವನ್ನು ಗಂಭೀರವಾಗಿ ಪರಿಗಣಿಸುವ ಅಗತ್ಯವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಹೆಚ್ಚಿನ ವ್ಯಾಕ್ಸಿನೇಷನ್ ಕೇಂದ್ರಗಳನ್ನು ನಿರ್ಮಿಸಬೇಕೆಂದು ಅವರು ಕರೆ ನೀಡಿದ್ದಾರೆ. ಸಾರ್ವಜನಿಕರನ್ನು ಪ್ಯಾನಿಕ್ ಮೋಡ್ ಗೆ ತರಬೇಕಾಗಿಲ್ಲ. ಹಾಗೆ ಸಮಸ್ಯೆಯಿಂದ ದೇಶವನ್ನು ಹೊರಗೆ ತರಬೇಕೆಂದು ಮೋದಿ ಹೇಳಿದ್ದಾರೆ.

ಕೆಲವು ರಾಜ್ಯಗಳಲ್ಲಿ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಈ ಹೆಚ್ಚಳವು ದೇಶದ 70 ಜಿಲ್ಲೆಗಳಲ್ಲಿ ಶೇಕಡಾ 150 ಕ್ಕಿಂತ ಹೆಚ್ಚಾಗಿದೆ. ಕೊರೊನಾದ ಈ ಎರಡನೇ ಏರಿಕೆಯನ್ನು ತಕ್ಷಣ ನಿಲ್ಲಿಸಬೇಕು. ಇದಕ್ಕಾಗಿ ವೇಗವಾಗಿ ಮತ್ತು ನಿರ್ಣಾಯಕ ಕ್ರಮಗಳನ್ನು ತೆಗೆದುಕೊಳ್ಳಬೇಕಾಗಿದೆ ಎಂದು ಮೋದಿ ಹೇಳಿದ್ದಾರೆ.

ಕೊರೊನಾ ವಿರುದ್ಧ ದೇಶದ ಹೋರಾಟವು ಒಂದು ವರ್ಷಕ್ಕೂ ಹೆಚ್ಚು ಕಾಲದಿಂದ ನಡೆಯುತ್ತಿದೆ. ಕಳೆದ ಒಂದು ವರ್ಷದಿಂದ ನಾವು ನಡೆಸುತ್ತಿರುವ ‘ಟೆಸ್ಟ್, ಟ್ರ್ಯಾಕ್ ಮತ್ತು ಟ್ರೀಟ್’ ಬಗ್ಗೆಯೂ ಗಂಭೀರವಾಗಿರಬೇಕು ಎಂದು ಮುಖ್ಯಮಂತ್ರಿಗಳೊಂದಿಗಿನ ಸಭೆಯಲ್ಲಿ ಮೋದಿ ಹೇಳಿದ್ದಾರೆ. ಸಣ್ಣ ನಗರಗಳಲ್ಲಿ ರೆಫರಲ್ ಸಿಸ್ಟಮ್ ಮತ್ತು ಆಂಬ್ಯುಲೆನ್ಸ್ ನೆಟ್ವರ್ಕ್ ಬಗ್ಗೆ  ವಿಶೇಷ ಗಮನ ಹರಿಸಬೇಕಾಗಿದೆ. ದೇಶದಲ್ಲಿ ಲಸಿಕೆ ಹಾಕುವ ವೇಗ ನಿರಂತರವಾಗಿ ಹೆಚ್ಚುತ್ತಿದೆ ಎಂದು ಮೋದಿ ಹೇಳಿದ್ದಾರೆ. ಒಂದೇ ದಿನದಲ್ಲಿ 30 ಲಕ್ಷ ಜನರಿಗೆ ಲಸಿಕೆ ಹಾಕುವ ಅಂಕಿ ಅಂಶವನ್ನೂ ನಾವು ದಾಟಿದ್ದೇವೆ. ಆದರೆ ಇದರೊಂದಿಗೆ ಲಸಿಕೆ ಡೋಸ್ ತ್ಯಾಜ್ಯದ ಸಮಸ್ಯೆಯನ್ನು ನಾವು ತುಂಬಾ ಗಂಭೀರವಾಗಿ ತೆಗೆದುಕೊಳ್ಳಬೇಕಾಗಿದೆ ಎಂದಿದ್ದಾರೆ. ಕೊರೊನಾ ಯುದ್ಧದಲ್ಲಿ ಲಸಿಕೆ ಪರಿಣಾಮಕಾರಿ ಅಸ್ತ್ರವಾಗಿದೆ ಎಂದು ಪ್ರಧಾನಿ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...