alex Certify ಪೊಲೀಸ್ ವಶದಲ್ಲಿದ್ದ ವ್ಯಕ್ತಿ ಸಾವು: ಸಿಐಡಿಗೆ ಕೇಸ್ ವರ್ಗಾವಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪೊಲೀಸ್ ವಶದಲ್ಲಿದ್ದ ವ್ಯಕ್ತಿ ಸಾವು: ಸಿಐಡಿಗೆ ಕೇಸ್ ವರ್ಗಾವಣೆ

ಬೆಳಗಾವಿ: ಬೆಳಗಾವಿ ಗ್ರಾಮಾಂತರ ಠಾಣೆ ಪೊಲೀಸರ ವಶದಲ್ಲಿದ್ದ ವ್ಯಕ್ತಿ ಸಾವನ್ನಪ್ಪಿದ್ದಾರೆ. ಬೆಲ್ಲದ ಬಾಗೇವಾಡಿ ಗ್ರಾಮದ ಬಸನಗೌಡ ಪಾಟೀಲ(45) ಮೃತಪಟ್ಟವರು ಎಂದು ಹೇಳಲಾಗಿದೆ.

ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿ ಗ್ರಾಮದ ಬಸನಗೌಡ ಪಾಟೀಲನನ್ನು ಗಾಂಜಾ ಪ್ರಕರಣದಲ್ಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ಬೆಲ್ಲದಬಾಗೇವಾಡಿಯಿಂದ ಬೆಳಗಾವಿಗೆ ಕರೆದುಕೊಂಡು ಬಂದಿದ್ದು, ಪೊಲೀಸ್ ವಿಚಾರಣೆ ವೇಳೆ ಬಸನಗೌಡ ಪಾಟೀಲ ಅಸ್ವಸ್ಥಗೊಂಡಿದ್ದಾರೆ.

ಆತನನ್ನು ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಎಂದು ಮೃತಪಟ್ಟಿದ್ದಾರೆ. ಪೊಲೀಸರ ವಶದಲ್ಲಿದ್ದಾಗಲೇ ಬಸನಗೌಡ ಪಾಟೀಲ ಮೃತಪಟ್ಟಿದ್ದಾರೆ ಎಂದು ಕೇಸು ದಾಖಲಿಸಲಾಗಿದ್ದು, ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾಯಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...