alex Certify BREAKING: ಹೃದಯಾಘಾತದಿಂದ ಪೊಲೀಸ್ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಹೃದಯಾಘಾತದಿಂದ ಪೊಲೀಸ್ ಸಾವು

ತುಮಕೂರು: ಹೃದಯಾಘಾತದಿಂದ ಪೊಲೀಸ್ ಕಾನ್ಸ್ಟೇಬಲ್ ಸಾವನ್ನಪ್ಪಿದ ಘಟನೆ ತುಮಕೂರು ಜಿಲ್ಲೆ ತಿಪಟೂರು ನಗರದಲ್ಲಿ ಘಟನೆ ನಡೆದಿದೆ.

ಕಾಂತರಾಜು ಮೃತಪಟ್ಟ ಪೊಲೀಸ್ ಕಾನ್ಸ್ಟೇಬಲ್ ಎಂದು ಹೇಳಲಾಗಿದೆ. ಕರ್ತವ್ಯ ಮುಗಿಸಿ ಮನೆಗೆ ತೆರಳಿದ್ದಾಗ ಕಾಂತರಾಜು ಅವರಿಗೆ ಹೃದಯಾಘಾತ ಸಂಭವಿಸಿದೆ. ಕೂಡಲೇ ಅವರನ್ನು ಹುಳಿಯಾರು ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಕಾಂತರಾಜು ಮೃತಪಟ್ಟಿದ್ದಾರೆ.

ಅವರು ತಿಪಟೂರು ನಗರ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಕೆಲಸ ಮಾಡಿದ ಪಿಸಿ ಕಾಂತರಾಜು ನಿಧನಕ್ಕೆ ಸಹೋದ್ಯೋಗಿಗಳು ಸಂತಾಪ ಸೂಚಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...