alex Certify ಪೊಲೀಸ್ ಇಲಾಖೆಯಲ್ಲಿ ಮತ್ತೆ ವರ್ಗಾವಣೆ ಪರ್ವ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪೊಲೀಸ್ ಇಲಾಖೆಯಲ್ಲಿ ಮತ್ತೆ ವರ್ಗಾವಣೆ ಪರ್ವ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ವರ್ಗಾವಣೆ ಪರ್ವ ಮುಂದುವರೆದಿದೆ. ಡಿವೈಎಸ್ಪಿಗಳು ಹಾಗೂ ಇನ್ಸ್ಪೆಕ್ಟರ್ ಗಳ ವರ್ಗಾವಣೆ ಪರ್ವ ಮುಂದುವರೆದಿದ್ದು, ಬುಧವಾರ ಕೂಡ ಹಲವು ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.

ಮೂವರು ಇನ್ಸ್ ಪೆಕ್ಟರ್ ಗಳು ಹಾಗೂ ಇಬ್ಬರು ಡಿವೈಎಸ್ಪಿಗಳನ್ನು ವರ್ಗಾವಣೆಗೊಳಿಸಿ ಪೊಲೀಸ್ ಇಲಾಖೆ ಆದೇಶ ಹೊರಡಿಸಿದೆ. ಬೆಂಗಳೂರಿನಲ್ಲಿ ಮೂರನೇ ಸಲ ತಡೆಹಿಡಿಯಲಾಗಿದ್ದ ವರ್ಗಾವಣೆ ಪಟ್ಟಿಯಲ್ಲಿದ್ದ ಆರು ಇನ್ಸ್ ಪೆಕ್ಟರ್ ಗಳ ಪೈಕಿ ಇಬ್ಬರನ್ನು ವರ್ಗಾವಣೆ ಮಾಡಲಾಗಿದೆ.

ಇಬ್ಬರು ಡಿವೈಎಸ್ಪಿಗಳನ್ನು ವರ್ಗಾವಣೆ ಮಾಡಿದ್ದು, ಪೊಲೀಸ್ ಇನ್ಸ್ ಪೆಕ್ಟರ್ ಹುದ್ದೆಯಿಂದ ಡಿವೈಎಸ್ಪಿ ಹುದ್ದೆಗೆ ಮುಂಬಡ್ತಿ ಪಡೆದು ವರ್ಗಾವಣೆಗೊಂಡಿದ್ದ ಇಬ್ಬರು ಡಿವೈಎಸ್ಪಿಗಳ ವರ್ಗಾವಣೆ ಆದೇಶದಲ್ಲಿ ಮಾರ್ಪಾಡು ಮಾಡಲಾಗಿದೆ.

ಸಿಐಡಿಯಿಂದ ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿದ್ದ ಇನ್ಸ್ಪೆಕ್ಟರ್ ಪುನೀತ್ ಮತ್ತು ದಾವಣಗೆರೆ ಜಿಲ್ಲೆ ಬಡಾವಣೆ ಠಾಣೆಯಿಂದ ಬೆಂಗಳೂರಿನ ಯಶವಂತಪುರ ಠಾಣೆಗೆ ವರ್ಗಾವಣೆಗೊಂಡಿದ್ದ ಧನಂಜಯ ಅವರ ವರ್ಗಾವಣೆ ಆದೇಶ ರದ್ದು ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...