alex Certify ಪೊಲೀಸರ ಮೇಲೆಯೇ ಚಾಕುವಿನಿಂದ ಹಲ್ಲೆಗೆ ಯತ್ನಿಸಿದ ಕೊಲೆ ಆರೋಪಿ ಕಾಲಿಗೆ ಗುಂಡು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪೊಲೀಸರ ಮೇಲೆಯೇ ಚಾಕುವಿನಿಂದ ಹಲ್ಲೆಗೆ ಯತ್ನಿಸಿದ ಕೊಲೆ ಆರೋಪಿ ಕಾಲಿಗೆ ಗುಂಡು

ಶಿವಮೊಗ್ಗ: ಕೊಲೆ ಆರೋಪಿ ಬಂಧಿಸಲು ತೆರಳಿದ್ದ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಲಾಗಿದ್ದು, ಈ ವೇಳೆ ಫೈರಿಂಗ್ ಮಾಡಿ ಕೊಲೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಚಾಕುವಿನಿಂದ ಹಲ್ಲೆಗೆ ಯತ್ನಿಸಿದ ಆರೋಪಿ ಸತೀಶ್ ಕಾಲಿಗೆ ಫೈರಿಂಗ್ ಮಾಡಲಾಗಿದೆ. ಶಿವಮೊಗ್ಗದ ಆಯನೂರಿನಲ್ಲಿ ಚಾಕುವಿನಿಂದ ಇರಿದು ಬಾರ್ ಕ್ಯಾಶಿಯರ್ ಕೊಲೆ ಮಾಡಲಾಗಿತ್ತು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಬಂಧಿಸಲು ತೆರಳಿದ ವೇಳೆ ಘಟನೆ ನಡೆದಿದೆ. ಸತೀಶ್ ಕುಂಸಿ ಠಾಣೆಯ ಪೊಲೀಸರಾದ ಪ್ರವೀಣ್, ಶಿವರಾಜ್ ಮೇಲೆ ಹಲ್ಲೆಗೆ ಯತ್ನಿಸಿದ್ದು, ಅವರ ಕೈಗೆ ಗಾಯಗಳಾಗಿವೆ. ಪಿಎಸ್ಐ ರಾಜುರೆಡ್ಡಿ ಅವರ ಮೇಲೆಯೂ ಹಲ್ಲೆಗೆ ಯತ್ನಿಸಿದಾಗ, ಎಚ್ಚರಿಕೆ ನೀಡಿ ಫೈರಿಂಗ್ ಮಾಡಿದ್ದಾರೆ.

ಬಾರ್ ಕ್ಯಾಶಿಯರ್ ಸಚಿನ್ ಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದ ಸತೀಶ್, ನಿರಂಜನ್, ಅಶೋಕ್ ನಾಯ್ಕ್ ಅವರನ್ನು ಬಂಧಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...