alex Certify ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನ; ಆರೋಪಿ ಮೇಲೆ ಪೊಲೀಸ್ ಫೈರಿಂಗ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನ; ಆರೋಪಿ ಮೇಲೆ ಪೊಲೀಸ್ ಫೈರಿಂಗ್

ಗದಗ: ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದ ಆರೋಪಿ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿರುವ ಘಟನೆ ಗದಗ ಜಿಲ್ಲೆಯಲ್ಲಿ ನಡೆದಿದೆ.

ರೌಡಿ ಶೀಟರ್ ಸಂಜಯ್ ಕೊಪ್ಪದ್ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಸ್ಥಳ ಮಹಜರು ವೇಳೆ ಆರೋಪಿ ಸಂಜಯ್ ಕೊಪ್ಪದ್ ಪೊಲೀಸರ ಮೇಲೆ ಹಲ್ಲೆ ನಡೆಸಿ ಎಸ್ಕೇಪ್ ಆಗಲು ಯತ್ನಿಸಿದ್ದ.

ಸಂಜಯ್ ಕೊಪ್ಪದ ದರೋಡೆ ಪ್ರಕರಣದಲ್ಲಿ ಭಾಗಿಯಾಗಿದ್ದ. ಆರೋಪಿಯನ್ನು ಗದಗ ಜಿಲ್ಲೆಯ ಲಕ್ಕುಂಡಿ ಕಣಗಿನಹಾಳ ರಸ್ತೆಯಲ್ಲಿ ಸ್ಥಳ ಮಹಜರಿಗೆ ಕರೆತಂದಿದ್ದ ವೇಳೆ ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಘಟನೆಯಲ್ಲಿ ಕಾನ್ಸ್ ಟೇಬಲ್ ಪ್ರಕಾಶ್ ಗಾಣಿಗೇರ ಕೈ ಹಾಗೂ ಕಾಲಿಗೆ ಗಾಯಗಳಾಗಿವೆ. ಆತ್ಮರಕ್ಷಣೆಗಾಗಿ ಈ ವೇಳೆ ಸಿಪಿಐ ಸಂಗಮೇಶ್ ಶಿವಯೋಗಿ ಸಂಜಯ್ ಮೇಲೆ ಫೈರಿಂಗ್ ಮಾಡಿ ವಶಕ್ಕೆ ಪಡೆದಿದ್ದಾರೆ.

ರೌಡಿಶೀಟರ್ ಸಂಜಯ್ ಕೊಪ್ಪದ ವಿರುದ್ಧ 12 ಪ್ರಕರನಗಳು ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...