alex Certify ಬಾಯಿಗೆ ಬೂಟು ಇಡುತ್ತೇನೆ: ಠಾಣೆಗೆ ಕರೆಸಿ ಪೊಲೀಸ್ ದೌರ್ಜನ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಾಯಿಗೆ ಬೂಟು ಇಡುತ್ತೇನೆ: ಠಾಣೆಗೆ ಕರೆಸಿ ಪೊಲೀಸ್ ದೌರ್ಜನ್ಯ

ತುಮಕೂರು: ವಿಚಾರಣೆಗೆ ಕರೆದು ವ್ಯಕ್ತಿ ಮೇಲೆ ಹೆಡ್ ಕಾನ್ಸ್ ಟೇಬಲ್ ದೌರ್ಜನ್ಯ ನಡೆಸಿದ ಆರೋಪ ಕೇಳಿ ಬಂದಿದೆ. ಅಮೃತೂರು ಠಾಣೆ ಹೆಡ್ ಕಾನ್ಸ್ಟೇಬಲ್ ಕೇಶವನಾಯ್ಕ್ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಅಮೃತೂರು ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಕೇಶವನಾಯ್ಕ್ ಅವರು ಕೌಟುಂಬಿಕ ಕಲಹಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಕರೆಸಿ ವ್ಯಕ್ತಿ ಮೇಲೆ ಹಲ್ಲೆ ಮಾಡಿದ್ದಾರೆ. ಬಾಯಿಗೆ ಬೂಟು ಇಡುತ್ತೇನೆ ಎಂದು ನಿಂದಿಸಿದ್ದಾರೆ. ವ್ಯಕ್ತಿ ಮೇಲೆ ಹಲ್ಲೆ ನಡೆಸಿ ಬಾಯಿಗೆ ಬಂದಂತೆ ಬೈದು ದೌರ್ಜನ್ಯ ಎಸಗಿದ್ದಾರೆ. ಮಾತನಾಡಿದರೆ ಚಿತ್ರಹಿಂಸೆ ನೀಡುವುದಾಗಿ ಹೇಳಿದ್ದಾರೆ. ಸಮಸ್ಯೆ ಏನೆಂದು ಕೇಳದೇ ದೌರ್ಜನ್ಯ ನಡೆಸಿದ್ದಾರೆ ಎಂದು ಹೇಳಲಾಗಿದೆ. ಅವರ ದೌರ್ಜನ್ಯದ ವಿಡಿಯೋ ವೈರಲ್ ಆಗಿದ್ದು ಸಾರ್ವಜನಿಕರಿಂದ ಅಮೃತೂರು ಠಾಣೆ ಪೊಲೀಸರ ದೌರ್ಜನ್ಯದ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...