alex Certify BIG BREAKING: ಉಗ್ರರಿಂದ ಪೈಶಾಚಿಕ ಕೃತ್ಯ; ಪೊಲೀಸ್, 7 ವರ್ಷದ ಪುತ್ರಿ ಮೇಲೆ ಗುಂಡಿನ ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಉಗ್ರರಿಂದ ಪೈಶಾಚಿಕ ಕೃತ್ಯ; ಪೊಲೀಸ್, 7 ವರ್ಷದ ಪುತ್ರಿ ಮೇಲೆ ಗುಂಡಿನ ದಾಳಿ

ಶ್ರೀನಗರ: ಮಂಗಳವಾರ ಸಂಜೆ ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಭಯೋತ್ಪಾದಕರು ಪೊಲೀಸ್ ಸಿಬ್ಬಂದಿಯನ್ನು ಹತ್ಯೆ ಮಾಡಿದ್ದಾರೆ. ಗುಂಡಿನ ದಾಳಿಯಲ್ಲಿ ಅವರ 7 ವರ್ಷದ ಮಗಳು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಶ್ರೀನಗರದ ಸೌರಾ ಪ್ರದೇಶದಲ್ಲಿ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದಾರೆ. ಮೃತ ಪೊಲೀಸ್ ನನ್ನು ಶ್ರೀನಗರದ ಸೌರಾ ಪ್ರದೇಶದ ಸೈಫುಲ್ಲಾ ಖಾದ್ರಿ ಎಂದು ಗುರುತಿಸಲಾಗಿದೆ. ಭಯೋತ್ಪಾದಕರು ಅವರನ್ನು ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆಸಿದ ನಂತರ ಪೋಲೀಸ್ ಸೈಫುಲ್ಲಾ ಖಾದ್ರಿ ಮತ್ತು ಅವರ ಮಗಳನ್ನು SKIMS ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ, ಸೈಫುಲ್ಲಾ ಸಾವನ್ನಪ್ಪಿದ್ದಾರೆ.

ಭಯೋತ್ಪಾದಕರನ್ನು ಸೆರೆಹಿಡಿಯಲು ಭದ್ರತಾ ಪಡೆ ಸಿಬ್ಬಂದಿ ಕಾರ್ಯಾಚರಣೆ ಕೈಗೊಂಡಿದ್ದಾರೆ. ಪ್ರದೇಶವನ್ನು ಸುತ್ತುವರಿಯಲಾಗಿದ್ದು, ಶೋಧ ಕಾರ್ಯಾಚರಣೆ ಮುಂದುವರೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...