alex Certify ನಿರುದ್ಯೋಗಿ ಯುವಕರಿಗೆ ಗುಡ್ ನ್ಯೂಸ್: ಅಂಚೆ ಇಲಾಖೆಯಿಂದ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಿರುದ್ಯೋಗಿ ಯುವಕರಿಗೆ ಗುಡ್ ನ್ಯೂಸ್: ಅಂಚೆ ಇಲಾಖೆಯಿಂದ ಅರ್ಜಿ ಆಹ್ವಾನ

ಕೊಪ್ಪಳ: ಅಂಚೆ ಇಲಾಖೆಯ ಗದಗ ವಿಭಾಗದಲ್ಲಿ ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಉತ್ಪನ್ನಗಳನ್ನು ಮಾರಾಟ ಮಾಡಲು ನೇರ ಪ್ರತಿನಿಧಿಗಳ ನಿಯುಕ್ತಿಗಾಗಿ ಪ್ರಸ್ತಾವನೆ ಸಲ್ಲಿಸಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.

ಅಭ್ಯರ್ಥಿಗಳು 18 ರಿಂದ 50 ವರ್ಷದೊಳಗಿನವರಾಗಿದ್ದು, 10 ನೇ ತರಗತಿ ಉತ್ತೀರ್ಣರಾಗಿರಬೇಕು. ನಿರುದ್ಯೋಗಿ ಹಾಗೂ ಸ್ವಯಂ ಉದ್ಯೋಗ ನಿರತ ಯುವಕರು, ವಿಮಾ ಕಂಪನಿಗಳ ಮಾಜಿ ಸಲಹೆಗಾರರು, ಮಾಜಿ ಸೈನಿಕರು, ಅಂಗನವಾಡಿ ಕಾರ್ಯಕರ್ತೆಯರು, ಮಹಿಳಾ ಮಂಡಳದ ಕಾರ್ಯಕರ್ತೆಯರು, ನಿವೃತ್ತ ಪ್ರಧಾನ ಮತ್ತು ಗ್ರಾಮ ಪಂಚಾಯತಿಯ ಸದಸ್ಯರು ಹಾಗೂ ಅಂಚೆ ವಿಭಾಗದ ಮುಖ್ಯಸ್ಥರಿಗೆ ಸಮಂಜಸವೆಂದು ಕಂಡುಬರುವ ಯಾವುದೇ ಅಭ್ಯರ್ಥಿಗಳಿಗೆ ಆಯ್ಕೆಯಾದ ಪಕ್ಷದಲ್ಲಿ ಅವಕಾಶ ನೀಡಲಾಗುವುದು.

ಆಯ್ಕೆಯಾದ ಅಭ್ಯರ್ಥಿಗಳು 5000 ರೂ.ಗಳನ್ನು ರಾಷ್ಟ್ರೀಯ ಉಳಿತಾಯ ಪತ್ರ ಅಥವಾ ಕಿಸಾನ್ ವಿಕಾಸ್ ಪತ್ರದ ರೂಪದಲ್ಲಿ ಭದ್ರತಾ ಠೇವಣಿಯನ್ನು ಇಡಬೇಕು. ಆಯ್ಕೆಯಾದ ನೇರ ಪ್ರತಿನಿಧಿಗಳಿಗೆ ನಿಗದಿತ ವೇತನ ಇರುವುದಿಲ್ಲ, ಅವರು ಮಾಡಿದ ವ್ಯವಹಾರಕ್ಕೆ ತಕ್ಕಂತೆ ಸೂಕ್ತ ಕಮೀಶನ್ ನೀಡಲಾಗುವುದು. ಬೇರೆ ಯಾವುದೇ ವಿಮಾ ಕಂಪನಿ, ಸಂಸ್ಥೆ, ಸಂಘಗಳ ಏಜೆಂಟ್ ಆಗಿರಬಾರದು.

ಅಭ್ಯರ್ಥಿಗಳು ಇತ್ತೀಚಿನ ಭಾವಚಿತ್ರ, ಶೈಕ್ಷಣಿಕ ಪ್ರಮಾಣಪತ್ರದ ನಕಲು ಹಾಗೂ ಸ್ವವಿವರಗಳೊಂದಿಗೆ ಗದಗ ಎಪಿಎಂಸಿ ಯಾರ್ಡ್ ಛೇಂಬರ್ ಆಫ್ ಕಾಮರ್ಸ್ ಎದುರುಗಡೆ ಇರುವ ಅಂಚೆ ಅಧೀಕ್ಷಕರ ಕಾರ್ಯಾಲಯದಲ್ಲಿ ಆಗಸ್ಟ್ 3 ರಂದು ಬೆಳಿಗ್ಗೆ 10 ಗಂಟೆಗೆ ನಡೆಯಲಿರುವ ನೇರ ಸಂದರ್ಶನಕ್ಕೆ ಹಾಜರಾಗಬೇಕು. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಅಂಚೆ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಗದಗ ವಿಭಾಗದ ಅಂಚೆ ಅಧೀಕ್ಷಕ ಪಿ.ಚಿದಾನಂದ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...