ಹುಬ್ಬಳ್ಳಿ : ಉಚಿತ ಪ್ರಯಾಣ ಬಿಟ್ಟರೆ ಸರ್ಕಾರದ ಎಲ್ಲಾ ಯೋಜನೆಗಳು ವಿಫಲವಾಗಿದೆ, ಕಾಂಗ್ರೆಸ್ ನವರು ಸುಳ್ಳು ಹೇಳುತ್ತಿದ್ದಾರೆ ಎಂದು ಪ್ರಹ್ಲಾದ್ ಜೋಶಿ ವಾಗ್ಧಾಳಿ ನಡೆಸಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಪ್ರಹ್ಲಾದ್ ಜೋಶಿ ಸುಳ್ಳು ಹೇಳುವುದು ಕಾಂಗ್ರೆಸ್ ನವರಿಗೆ ರಕ್ತಗತವಾಗಿ ಬಂದಿದೆ. ಅಕ್ಕಿ ಸ್ಟಾಕ್ ಇದೆ ಎನ್ನುವುದು ಶುದ್ದ ಸುಳ್ಳು ಎಂದು ಪ್ರಹ್ಲಾದ್ ಜೋಶಿ ವಾಗ್ಧಾಳಿ ನಡೆಸಿದ್ದಾರೆ. ಕೇಂದ್ರ ಸರ್ಕಾರ 5 ಕೆಜಿ ಅಕ್ಕಿ ಕೊಡುತ್ತಿತ್ತು ಎಂಬುದನ್ನು ಒಪ್ಪಿಕೊಳ್ಳಿ, ನೀವು ದುರಹಂಕಾರ ತೋರಿಸಿದರೆ ಜನರೇ ಬುದ್ದಿ ಕಲಿಸುತ್ತಾರೆ ಎಂದು ವಾಗ್ಧಾಳಿ ನಡೆಸಿದರು.
ಜನರಿಗೆ ಸುಳ್ಳು ಹೇಳಿಯೇ ನೀವು ಅಧಿಕಾರಕ್ಕೆ ಬಂದಿದ್ದೀರಿ, ಎಲ್ಲಾ ಗ್ಯಾರಂಟಿ ಯೋಜನೆ ಜಾರಿಯಾಗದಿದ್ದರೆ ವಿಧಾನಸೌಧದ ಬಳಿ ಜುಲೈ 4 ರಂದು ಬಿ.ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಪ್ರತಿಭಟನೆ ನಡೆಸುತ್ತೇವೆ ಎಂದು ರಾಜ್ಯ ಸರ್ಕಾರದ ವಿರುದ್ಧ ಪ್ರಹ್ಲಾದ್ ಜೋಶಿ ವಾಗ್ಧಾಳಿ ನಡೆಸಿದ್ದಾರೆ.