alex Certify BREAKING: ತಡರಾತ್ರಿ ಬಂಧನ ಬೆನ್ನಲ್ಲೇ ಎಸ್ಐಟಿ ಕಚೇರಿಗೆ ಪ್ರಜ್ವಲ್ ರೇವಣ್ಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ತಡರಾತ್ರಿ ಬಂಧನ ಬೆನ್ನಲ್ಲೇ ಎಸ್ಐಟಿ ಕಚೇರಿಗೆ ಪ್ರಜ್ವಲ್ ರೇವಣ್ಣ

ಬೆಂಗಳೂರು: ಲೈಂಗಿಕ ದೌರ್ಜನ್ಯ ಆರೋಪಿ, ಹಾಸನ ಸಂಸದ ಪ್ರಜ್ವಲ್ ರೇವಣ್ಣ 34 ದಿನಗಳ ನಂತರ ವಿದೇಶದಿಂದ ಆಗಮಿಸಿದ್ದಾರೆ. ದೇವನಹಳ್ಳಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಡರಾತ್ರಿ ಬಂದಿಳಿದ ಪ್ರಜ್ವಲ್ ರೇವಣ್ಣ ಅವರನ್ನು ಎಸ್ಐಟಿ ಬಂಧಿಸಿದೆ.

ಜರ್ಮನಿಯ ಮ್ಯೂನಿಕ್ ನಗರದಿಂದ ಗುರುವಾರ ಮಧ್ಯಾಹ್ನ ಹೊರಟಿದ್ದ ಪ್ರಜ್ವಲ್ ರೇವಣ್ಣ ರಾತ್ರಿ 12:40ಕ್ಕೆ ಬೆಂಗಳೂರಿಗೆ ಆಗಮಿಸಿದ್ದಾರೆ. ಅವರನ್ನು ವಶಕ್ಕೆ ಪಡೆದುಕೊಂಡ ಎಸ್ಐಟಿ ವಿಮಾನ ನಿಲ್ದಾಣದಿಂದ ಎಸ್ಐಟಿ ಕಚೇರಿಗೆ ಕರೆತಂದಿದೆ. ಚಾಲುಕ್ಯ ಸರ್ಕಲ್ ಎಸ್ಐಟಿ ಕಚೇರಿ ಬಳಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.

ಇಂದು ಪ್ರಜ್ವಲ್ ರೇವಣ್ಣ ಅವರನ್ನು ವೈದ್ಯಕೀಯ ತಪಾಸಣೆಗೆ ಕರೆದೊಯ್ಯಲಿದ್ದು, ನಂತರ ಕೋರ್ಟ್ ಗೆ ಹಾಜರುಪಡಿಸಿ ವಿಚಾರಣೆಗೆ ಕಸ್ಟಡಿಗೆ ಪಡೆಯಲು ಎಸ್ಐಟಿ ಮುಂದಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...