alex Certify BIG NEWS: ಈಗ ದಾರಿ ತಪ್ಪಿದ್ದು ಯಾರು ಕುಮಾರಸ್ವಾಮಿಯವರೇ? ನಿಮ್ಮ ಮನೆ ಮಗನ ಬಗ್ಗೆ ಏನಂತ ಹೇಳುತ್ತೀರಿ? ಸಚಿವ ಕೃಷ್ಣೇಬೈರೇಗೌಡ ವಾಗ್ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಈಗ ದಾರಿ ತಪ್ಪಿದ್ದು ಯಾರು ಕುಮಾರಸ್ವಾಮಿಯವರೇ? ನಿಮ್ಮ ಮನೆ ಮಗನ ಬಗ್ಗೆ ಏನಂತ ಹೇಳುತ್ತೀರಿ? ಸಚಿವ ಕೃಷ್ಣೇಬೈರೇಗೌಡ ವಾಗ್ದಾಳಿ

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣ ಇಡೀ ದೇಶದಲ್ಲಿಯೇ ಅತಿ ದೊಡ್ಡ ಲೈಂಗಿಕ ಹಗರಣ ಎಂದು ಸಚಿವ ಕೃಷ್ಣೇಬೈರೇಗೌಡ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕೃಷ್ಣಬೈರೇಗೌಡ, ಮಹಿಳೆಯರು ದಾರಿ ತಪ್ಪುತ್ತಿದ್ದಾರೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳುತ್ತಾರೆ. ಈಗ ದಾರಿ ತಪ್ಪಿದ್ದು ಯಾರು ಕುಮಾರಸ್ವಾಮಿಯವರೇ? ನಿಮ್ಮ ಮನೆ ಮಗನೇ ದಾರಿ ತಪ್ಪಿದ್ದಾನೆ. ಇದಕ್ಕೆ ಏನೆಂದು ಹೇಳುತ್ತೀರಿ? ಎಂದು ಕಿಡಿಕಾರಿದ್ದಾರೆ.

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ದೇಶದ ಇತಿಹಾಸದಲ್ಲಿಯೇ ದೊಡ್ಡ ಲೈಂಗಿಕ ಹಗರಣವಾಗಿದೆ. 100ಕ್ಕೂ ಹೆಚ್ಚು ಮಹಿಳೆಯರ ಮೇಲಿನ ಅತ್ಯಾಚಾರ ಖಂಡನೀಯ. ಮಾಜಿ ಪ್ರಧಾನಿಯೊಬ್ಬರ ಮೊಮ್ಮಗ ಈ ರೀತಿ ಮಾಡಿರುವುದು ದೊಡ್ಡ ತಪ್ಪು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮಗ ಇಷ್ಟೆಲ್ಲ ಮಾಡಿದರೂ ಹೆಚ್.ಡಿ.ರೇವಣ್ಣಗೆ ಗೊತ್ತೇ ಇಲ್ವಾ? ಅಥವಾ ಗೊತ್ತಿದ್ರೂ ಇಂತಹ ಕೃತ್ಯಕ್ಕೆ ಪ್ರೋತ್ಸಾಹ ನೀಡುತ್ತಿದ್ದಾರಾ? ಸಂಸದ ಪ್ರಜ್ವಲ್ ಪೋಷಕರು ಇದಕ್ಕೆಲ್ಲ ಉತ್ತರ ಕೊಡಬೇಕು ಎಂದು ಆಗ್ರಹಿಸಿದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Najít kočku: vrcholový test pozornosti на Kde se skrývá autíčko: jen ti nejpozornější ho najdou Vynikající jemné Jak najít měsíc v koláčcích za 7 sekund: výzva