alex Certify ಸಿಎಂ ಯೋಗಿ ಆದಿತ್ಯನಾಥ್ ಬದಲಾವಣೆ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿಎಂ ಯೋಗಿ ಆದಿತ್ಯನಾಥ್ ಬದಲಾವಣೆ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯೆ

ಹುಬ್ಬಳ್ಳಿ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಬದಲಾವಣೆಯ ವಿಚಾರಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯೆ ನೀಡಿದ್ದಾರೆ.

ಯೋಗಿ ಆದಿತ್ಯನಾಥ್ ಬದಲಾವಣೆ ಕೇವಲ ಊಹಾಪೋಹವಷ್ಟೇ. ಉತ್ತರ ಪ್ರದೇಶ ಸಿಎಂ ಯೋಗಿ ಒಳ್ಳೆಯ ನಾಯಕರಾಗಿದ್ದಾರೆ. ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಪ್ರಧಾನಿ ಮೋದಿ ಅವರನ್ನು ಆದಿತ್ಯನಾಥ್ ಭೇಟಿಯಾಗಿದ್ದಾರೆ. ಭೇಟಿಯಾದ ವಿಚಾರಕ್ಕೆ ಸಿಎಂ ಬದಲಾವಣೆ ಎಂಬ ಚರ್ಚೆಯಾಗುತ್ತಿದೆ. ಇಂತಹ ಚರ್ಚೆಗಳೇ ವಿಚಿತ್ರ ಅನಿಸುತ್ತದೆ ಎಂದು ಹೇಳಿದ್ದಾರೆ.

ಕೇಂದ್ರ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆಯಾಗಿಲ್ಲ. ನನಗೆ ಮಾಹಿತಿ ಇಲ್ಲ. ಸಂಪುಟ ವಿಸ್ತರಣೆ ಬಗ್ಗೆ ಪ್ರಧಾನಿ ಮೋದಿ ಅವರು ನಿರ್ಧಾರ ಮಾಡುತ್ತಾರೆ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...