alex Certify BIG NEWS: ರಾಜ್ಯ ಸರ್ಕಾರದಿಂದಲೇ ರೇಣುಕಾಸ್ವಾಮಿ ಕೊನೆ ಕ್ಷಣದ ರಿಟ್ರೀವ್ ಫೋಟೋ, ದರ್ಶನ್ ಜೈಲಿನ ಫೋಟೋ ಬಹಿರಂಗ: ಪ್ರಹ್ಲಾದ್ ಜೋಶಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜ್ಯ ಸರ್ಕಾರದಿಂದಲೇ ರೇಣುಕಾಸ್ವಾಮಿ ಕೊನೆ ಕ್ಷಣದ ರಿಟ್ರೀವ್ ಫೋಟೋ, ದರ್ಶನ್ ಜೈಲಿನ ಫೋಟೋ ಬಹಿರಂಗ: ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ: ದರ್ಶನ್ ಮತ್ತು ಗ್ಯಾಂಗ್ ನಿಂದ ಚಿತ್ರದುರ್ಗದ ರೇಣುಕಾಸ್ವಾಮಿ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಟ್ರೀವ್ ಮಾಡಿರುವ ಫೋಟೋ ಬಿಟ್ಟಿರುವುದು ಅಕ್ಷಮ್ಯ ಅಪರಾಧ ಎಂದು ಕೇಂದ್ರ ಆಹಾರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಪರಪ್ಪನ ಅಗ್ರಹಾರ ಜೈಲಿನ ದರ್ಶನ್ ಫೋಟೋ ಹೊರಬಿಟ್ಟಿದ್ದೆ ಸರ್ಕಾರ. ರೇಣುಕಾಸ್ವಾಮಿ ಕೊಲೆ ಕರ್ನಾಟಕ ಕಂಡ ಅತ್ಯಂತ ಕ್ರೂರವಾದ ಹತ್ಯೆಯಾಗಿದೆ. ಮುಡಾ, ವಾಲ್ಮೀಕಿ ನಿಗಮದ ಹಗರಣಗಳ ಬಗ್ಗೆ ದೊಡ್ಡ ಚರ್ಚೆಯಾಯಿತು. ಈ ವಿಚಾರ ಡೈವರ್ಟ್ ಮಾಡಲು ದರ್ಶನ್ ಕೇಸ್ ಮುನ್ನೆಲೆಗೆ ತಂದರು. ರಾಜ್ಯ ಸರ್ಕಾರ ಸಂಕುಚಿತ ಷಡ್ಯಂತ್ರ ನಡೆಸಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ರೇಣುಕಾಸ್ವಾಮಿ ಕ್ರೂರವಾಗಿ ಹತ್ಯೆಗೈದ ಆರೋಪಿಗಳಿಗೆ ಶಿಕ್ಷೆಯಾಗಬೇಕು. ರಿಟ್ರೀವ್ ಮಾಡಿರುವ ಫೋಟೋ ಬಿಟ್ಟಿರುವುದು ಅಕ್ಷಮ್ಯ ಅಪರಾಧವಾಗಿದೆ. ಈ ವಿಚಾರವನ್ನು ನ್ಯಾಯಾಲಯ ಕೂಡ ಪರಿಗಣನೆಗೆ ತೆಗೆದುಕೊಳ್ಳುತ್ತದೆ. ಫೋಟೋ ಹೊರಗಡೆ ಬಿಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ವಿಷಯ ಡೈವರ್ಟ್ ಮಾಡಲು ರಾಜ್ಯ ಸರ್ಕಾರ ಈ ರೀತಿ ಮಾಡುತ್ತಿದೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...