alex Certify ರಾಜ್ಯಕ್ಕೆ ಗುಜರಾತ್ ಮಾದರಿ ಸಂಪೂರ್ಣ ಅನ್ವಯ ಆಗಲ್ಲ: ವಯಸ್ಸಿನ ಮಾನದಂಡ ಇಲ್ಲದೇ ಹಿರಿಯರಿಗೂ ಟಿಕೆಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯಕ್ಕೆ ಗುಜರಾತ್ ಮಾದರಿ ಸಂಪೂರ್ಣ ಅನ್ವಯ ಆಗಲ್ಲ: ವಯಸ್ಸಿನ ಮಾನದಂಡ ಇಲ್ಲದೇ ಹಿರಿಯರಿಗೂ ಟಿಕೆಟ್

ಧಾರವಾಡ: ಗುಜರಾತ್ ಮಾದರಿ ನಮ್ಮ ರಾಜ್ಯಕ್ಕೆ ಸಂಪೂರ್ಣ ಅನ್ವಯವಾಗಲ್ಲ. ಹಿರಿಯರ ಸಾಧನೆ ಗುರುತಿಸಿ ಪಕ್ಷ ಟಿಕೆಟ್ ನೀಡಿದ ಅನೇಕ ಉದಾಹರಣೆಗಳಿವೆ. ಕೆಲವೊಂದು ಸಲ ಹಿರಿಯರಿಗೆ ಟಿಕೆಟ್ ನೀಡುವ ವಿಚಾರದಲ್ಲಿ ವಯಸ್ಸಿನ ಮಾನದಂಡ ಪರಿಗಣನೆಗೆ ಬರುವುದಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ.

ಕಲಘಟಗಿ ಶಾಸಕ ಸಿ.ಎಂ. ನಿಂಬಣ್ಣವರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಹ್ಲಾದ್ ಜೋಶಿ, ಪಕ್ಷದ ವರಿಷ್ಠರು ಟಿಕೆಟ್ ನೀಡುವ ವಿಚಾರದಲ್ಲಿ ಸೂಕ್ತ ತೀರ್ಮಾನ ಕೈಗೊಳ್ಳುತ್ತಾರೆ. ಪಕ್ಷದ ಸಿದ್ಧಾಂತದ ಅಡಿಯಲ್ಲಿ ಟಿಕೆಟ್ ಆಕಾಂಕ್ಷಿಗಳು ಪ್ರಚಾರ ಮಾಡಬೇಕು. ವೈಯಕ್ತಿಕ ವಿಚಾರ ಇಟ್ಟುಕೊಂಡು ಪ್ರಚಾರ ಮಾಡಿದರೆ ಹಿನ್ನಡೆಯಾಗುತ್ತದೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...