alex Certify ಸಿದ್ಧರಾಮಯ್ಯನವರನ್ನು ಹಾಡಿಹೊಗಳಿದ ಪ್ರತಾಪ್ ಸಿಂಹ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿದ್ಧರಾಮಯ್ಯನವರನ್ನು ಹಾಡಿಹೊಗಳಿದ ಪ್ರತಾಪ್ ಸಿಂಹ

ಮೈಸೂರು ಸಂಸದ ಪ್ರತಾಪ್ ಸಿಂಹ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹಾಡಿ ಹೊಗಳಿದ್ದಾರೆ.

ಮೈಸೂರಿನ ಕೆಆರ್ಎಸ್ ರಸ್ತೆಯಲ್ಲಿರುವ ಹೊಸದಾಗಿ ನಿರ್ಮಾಣಗೊಂಡ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕೋವಿಡ್ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಉದ್ಘಾಟನೆಗೊಂಡಿದೆ. ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಮತ್ತು ಶಾಸಕ ನಾಗೇಂದ್ರಣ್ಣ ಅವರ ಸಹಕಾರದಿಂದ ಆಸ್ಪತ್ರೆ ಕಾಮಗಾರಿ ತ್ವರಿತವಾಗಿ ಪೂರ್ಣಗೊಂಡು ಲೋಕಾರ್ಪಣೆಗೊಂಡಿದೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.

ಮೈಸೂರಿನ ಬಗ್ಗೆ ವಿಶೇಷ ಕಾಳಜಿ ಹೊಂದಿರುವ ಸಿದ್ದರಾಮಯ್ಯನವರ ಪ್ರಯತ್ನದಿಂದ 272 ಬೆಡ್ ಗಳ ಸುಸಜ್ಜಿತ ಆಸ್ಪತ್ರೆ ನಿರ್ಮಾಣವಾಗಿದೆ. ಅವರು 127 ಕೋಟಿ ರೂಪಾಯಿ ಅನುದಾನ ನೀಡುವ ಮೂಲಕ ಇದಕ್ಕೆ ಕಾರಣೀಭೂತರಾಗಿದ್ದಾರೆ. ಜಯದೇವ ಆಸ್ಪತ್ರೆ, ಟ್ರಾಮಾ ಸೆಂಟರ್, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ನಿರ್ಮಾಣದಲ್ಲಿ ಸಿದ್ದರಾಮಯ್ಯನವರು ಕಾರಣರಾಗಿದ್ದು, ಅವರಿಗೆ ಧನ್ಯವಾದ ಹೇಳುತ್ತೇನೆ ಎಂದು ತಿಳಿಸಿದ್ದಾರೆ.

ಕಾಳಜಿಯಿಂದ ಮೈಸೂರಿಗೆ ಕೊಡುಗೆ ನೀಡಿದ ಸಿದ್ದರಾಮಯ್ಯನವರಿಗೆ ಸಮಸ್ತ ಮೈಸೂರಿನ ಜನತೆ ಪರವಾಗಿ ಧನ್ಯವಾದಗಳು ತಿಳಿಸಿದ್ದಾರೆ.

ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಸರ್ ಗೆ ಧನ್ಯವಾದಗಳು…

Posted by Pratap Simha on Thursday, May 6, 2021

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...